2:21 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಗೆ ಆಸರೆ ನೀಡಿದ ಸರಕಾರಿ ವೈದ್ಯ: ತಾಯಿ- ಮಗು ಆರೋಗ್ಯ

27/06/2023, 13:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬ ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.


ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರುವ ಗರ್ಭೀಣಿ ಮಹಿಳೆ ಯಶೋಧ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ಹೊರಟಿದ್ದರು. ಆಕೆ ಜೊತೆ ಬೇರೊಬ್ಬಳು ಮಹಿಳೆ ಇದ್ದಳು. ಅಜ್ಜಂಪುರದಿಂದ ತರೀಕೆರೆಗೆ ಬಂದು ಶಿವಮೊಗ್ಗ ತೆರಳಲು ಬಸ್ ಕಾಯುವಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಸ್ಥಳದಲ್ಲಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ಆಸ್ಪತ್ರೆಗೆ ಹೊರಟ ಮಹಿಳೆ ಆಸ್ಪತ್ರೆ ಮುಟ್ಟುವ ಮುನ್ನವೇ ಆಸ್ಪತ್ರೆಯ ತುಸು ದೂರದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದಳು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಆರ್. ದೇವರಾಜ್ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯರನ್ನು ಕರೆಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ.‌ ಗರ್ಭಿಣಿ ಮಹಿಳೆ ಯಶೋಧ ಬಿ ನೆಗೆಟಿವ್ ರಕ್ತಕ್ಕಾಗಿಯೇ ಶಿವಮೊಗ್ಗ ಹೋಗುತ್ತಿದ್ದರು. ವೈದ್ಯರು ನಿನಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಧೈರ್ಯ ತುಂಬಿ ಹೆರಿಗೆ ಮಾಡಿಸುತ್ತಾರೆ. ಆರಂಭದ ಮೂರು ತಿಂಗಳು ಖಾಸಗಿ ಆಸ್ಪತ್ರೆಗೆ ತೋರಿಸಿದ್ದ ಗರ್ಭಿಣಿ ಯಶೋಧ ಅಲ್ಲಿ ಹೆರಿಗೆಗೆ 30000 ಹಣ ಕೇಳಿದರು ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯರ ಕೆಲಸಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‌ ಮಹಿಳೆ ಯಶೋಧ ಕೂಡ ತರೀಕೆರೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.‌

ಇತ್ತೀಚಿನ ಸುದ್ದಿ

ಜಾಹೀರಾತು