3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು