11:34 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು