12:18 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ !

21/07/2021, 18:14

ಮಂಗಳೂರು( reporterkarnataka news): 

ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್  ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು.

ನಗರದ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರ ಆರೋಗ್ಯ ಸ್ಥಿತಿಯನ್ನು ಕಂಡ ಬಳಿಕ ಪೂಜಾರಿ ಅವರು ಕಣ್ಣೀರ ಕೋಡಿ ಹರಿಸಿದರು. ಮಾಧ್ಯಮದ ಜತೆ ಮಾತನಾಡಲು ಯತ್ನಿಸಿದ ಪೂಜಾರಿ ಅವರು ಭಾವುಕರಾಗಿ ಮಾತು ಹೊರ ಹೊಮ್ಮಲೇ ಇಲ್ಲ. ಎರಡು ಪದ ಆಡುವಷ್ಟರಲ್ಲಿ ಗದ್ಗದಿತರಾಗಿ ತಲೆ ಮೇಲೆ ಕೈಇಟ್ಟು ರೋಧಿಸಲಾರಂಭಿಸಿದರು.

ರಾಜಕೀಯದಲ್ಲಿ ಸಮಕಾಲೀನರಾದ ಪೂಜಾರಿ ಮತ್ತು ಆಸ್ಕರ್ ಫರ್ನಾಂಡಿಸ್ ಅವರು ಒಳ್ಳೆಯ ಮಿತ್ರರೂ ಕೂಡ ಆಗಿದ್ದರು. ಪೂಜಾರಿ ಅವರು ಸಂಸತ್ ನಲ್ಲಿ ಮಂಗಳೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೆ, ಆಸ್ಕರ್ ಅವರು ನೆರೆಯ ಉಡುಪಿ ಕ್ಷೇತ್ರದಿಂದ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಪ್ರಬಲ ನಾಯಕರಾಗಿ ಅವರು ಹೊರ ಹೊಮ್ಮಿದ್ದರು.

ಯೋಗಾಭ್ಯಾಸ ಮಾಡುವಾಗ ಜಾರಿ ಬಿದ್ದು ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆಸ್ಕರ್ ಫೆರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನಗರದ ಅತ್ತಾವರದ ಫ್ಲ್ಯಾಟ್ ನಲ್ಲಿ ಎಂದಿನಂತೆ ಯೋಗಾಭ್ಯಾಸ ನಿರತರಾಗಿದ್ದ ವೇಳೆ ಮಾಜಿ ಸಚಿವರು ಬಿದ್ದು ಗಾಯಗೊಂಡಿದ್ದರು. ಹೊರ ನೋಟಕ್ಕೆ ಯಾವುದೇ ಗಾಯಗಳಿಲ್ಲದ ಹಿನ್ನೆಲೆಯಲ್ಲಿ ಅವರು ನಿರ್ಲಕ್ಷ್ಯ ವಹಿಸಿದ್ದರು. ಆದರೆ ಅದೇ ದಿನ ಸಂಜೆ ಡಯಾಲಿಸಿಸ್ ಗೆ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಭಾಗದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ಅವರನ್ನು ನೋಡಿಕೊಳ್ಳುವ ವೈದ್ಯರು ಮಾಹಿತಿ ನೀಡಿದ್ದರು. ನಂತರ ಅವರು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು