9:09 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ !

21/07/2021, 18:14

ಮಂಗಳೂರು( reporterkarnataka news): 

ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್  ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು.

ನಗರದ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರ ಆರೋಗ್ಯ ಸ್ಥಿತಿಯನ್ನು ಕಂಡ ಬಳಿಕ ಪೂಜಾರಿ ಅವರು ಕಣ್ಣೀರ ಕೋಡಿ ಹರಿಸಿದರು. ಮಾಧ್ಯಮದ ಜತೆ ಮಾತನಾಡಲು ಯತ್ನಿಸಿದ ಪೂಜಾರಿ ಅವರು ಭಾವುಕರಾಗಿ ಮಾತು ಹೊರ ಹೊಮ್ಮಲೇ ಇಲ್ಲ. ಎರಡು ಪದ ಆಡುವಷ್ಟರಲ್ಲಿ ಗದ್ಗದಿತರಾಗಿ ತಲೆ ಮೇಲೆ ಕೈಇಟ್ಟು ರೋಧಿಸಲಾರಂಭಿಸಿದರು.

ರಾಜಕೀಯದಲ್ಲಿ ಸಮಕಾಲೀನರಾದ ಪೂಜಾರಿ ಮತ್ತು ಆಸ್ಕರ್ ಫರ್ನಾಂಡಿಸ್ ಅವರು ಒಳ್ಳೆಯ ಮಿತ್ರರೂ ಕೂಡ ಆಗಿದ್ದರು. ಪೂಜಾರಿ ಅವರು ಸಂಸತ್ ನಲ್ಲಿ ಮಂಗಳೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೆ, ಆಸ್ಕರ್ ಅವರು ನೆರೆಯ ಉಡುಪಿ ಕ್ಷೇತ್ರದಿಂದ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಪ್ರಬಲ ನಾಯಕರಾಗಿ ಅವರು ಹೊರ ಹೊಮ್ಮಿದ್ದರು.

ಯೋಗಾಭ್ಯಾಸ ಮಾಡುವಾಗ ಜಾರಿ ಬಿದ್ದು ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆಸ್ಕರ್ ಫೆರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನಗರದ ಅತ್ತಾವರದ ಫ್ಲ್ಯಾಟ್ ನಲ್ಲಿ ಎಂದಿನಂತೆ ಯೋಗಾಭ್ಯಾಸ ನಿರತರಾಗಿದ್ದ ವೇಳೆ ಮಾಜಿ ಸಚಿವರು ಬಿದ್ದು ಗಾಯಗೊಂಡಿದ್ದರು. ಹೊರ ನೋಟಕ್ಕೆ ಯಾವುದೇ ಗಾಯಗಳಿಲ್ಲದ ಹಿನ್ನೆಲೆಯಲ್ಲಿ ಅವರು ನಿರ್ಲಕ್ಷ್ಯ ವಹಿಸಿದ್ದರು. ಆದರೆ ಅದೇ ದಿನ ಸಂಜೆ ಡಯಾಲಿಸಿಸ್ ಗೆ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಭಾಗದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ಅವರನ್ನು ನೋಡಿಕೊಳ್ಳುವ ವೈದ್ಯರು ಮಾಹಿತಿ ನೀಡಿದ್ದರು. ನಂತರ ಅವರು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು