5:57 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಶಾಸಕ ಡಾ.ಭರತ್ ಶೆಟ್ಟಿ: ಆರೋಗ್ಯ ವಿಚಾರಣೆ

28/06/2023, 22:11

ಮಂಗಳೂರು(reporterkarnataka.com): ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚೂರಿ ಇರಿತಕ್ಕೊಳಗಾದ ಭವಿತ್ ಅವರನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ ಹೋಗುತ್ತಿದ್ದ ಸಂದರ್ಭ ಆರೋಪಿ ಸಾದಿಕ್ ಹಿಂಬಾಲಿಸಿಕೊಂಡು ಬಂದಿದ್ದು,ಆಕೆ ಭಯಗೊಂಡು ಧನುಷ್ ಎಂಬಾತನ ಮನೆಗೆ ಹೋಗಿ ನನಗೆ ಫೋನ್ ಮಾಡಿ ತಿಳಿಸಿದ್ದಾರೆ.

ತಾನು ಸಾದಿಕ್ ನನ್ನು ಪ್ರಶ್ನಿಸಿದಾಗ ಸಾದಿಕ್ ಕೆಟ್ಟದಾಗಿ ಬೈದು ಕೊಲ್ಲುವ ಉದ್ದೇಶದಿಂದ ಚೂರಿ ಇರಿದಿದ್ದಾನೆ ಎಂದು ಮಾಹಿತಿ ನೀಡಿದರು.
ಚೂರಿ ಇರಿದ ಆರೋಪಿ ತಣ್ಣೀರುಬಾವಿ ನಿವಾಸಿ ಸಾದಿಕ್ ಎಂಬಾತನಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಣಂಬೂರು ವಿಭಾಗದ ಎಸಿಪಿ ಅವರಿಗೆ ಸೂಚಿಸಿದ್ದೇನೆ ಎಂದು ಡಾ.ಭರತ್ ಶೆಟ್ಟಿ ಹೇಳಿದರು. ಇಂತಹ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು. ಇದನ್ನೇ ಕೋಮು ಗಲಭೆಗೆ ಬಳಸಿ ಹಿಂದೂ ಸಂಘಟನೆಯ ಯುವಕರ ಮೇಲೆ ಗೂಬೆ ಕೂರಿಸುವ ಸಂಚು ಈ ಕಾಂಗ್ರೆಸ್ ಸರಕಾರದಲ್ಲಿ ನಡೆಯುವ ಶಂಕೆಯೂ ನನಗಿದೆ. ಹಿಂದೂ ಯುವತಿಯರ ರಕ್ಷಣೆಗೆ ಹಿಂದೂ ಸಮಾಜ ಶಕ್ತವಾಗಿದೆ. ದೂರದ ಪಶ್ಚಿಮ ಬಂಗಾಳದಂತಹ ರಾಜ್ಯದಲ್ಲಿ ಆಗುವ ಇಂತಹ ಘಟನೆ ಇಲ್ಲಿ ನಡೆಯಲು ಆರಂಭವಾಗಿರುವುದು ಆತಂಕಕಾರಿ. ಇಂತಹ ಸೂಕ್ಷ ವಿಚಾರವನ್ನು ನೈತಿಕ ಪೊಲೀಸ್ ಗಿರಿ ಎಂದು ಬಣ್ಣ ಹಚ್ಚಲು ಅವಕಾಶ ಕೊಡದೆ ಪೊಲೀಸರು ತಕ್ಷಣ ಬಗೆಹರಿಸಲು ಕ್ರಮ ಜರಗಿಸಬೇಕು. ಹೊಸ ಹೋರಾಟ ,ಪ್ರತಿಭಟನೆಗೆ ಅವಕಾಶ ನೀಡಬೇಡಿ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ತೀವ್ರ ನಿಗಾವಹಿಸಬೇಕು ಎಂದು ಎಚ್ಚರಿಸಿದರು.
ಮನಪಾ ಸದಸ್ಯರಾದ ಸುನಿತಾ ಯುವಮೋರ್ಚಾ ಪ್ರಮುಖರಾದ ಭರತ್ ರಾಜ್, ಸಂಜಿತ್ ಶೆಟ್ಟಿ, ರಾಹುಲ್, ಹರಿಪ್ರಸಾದ್ ಶೆಟ್ಟಿ, ದಿವೇಶ್, ತಿಲಕ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು