5:58 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ನಿರಂತರ ದೈಹಿಕ ಸಂಪರ್ಕ: ಆರೋಪಿ ಸೆರೆ; ನ್ಯಾಯಾಂಗ ಬಂಧನ

29/06/2023, 19:03

ಮಂಗಳೂರು(reporterkarnataka.com): ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿದಂತೆ ಕಡಬ ಮೂಲದ ಯುವಕನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು 24ರ ಹರೆಯದ ಸಂತ್ರಸ್ತ ಯುವತಿ ಜೂನ್ 26ರಂದು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನು ಇನ್ ಸ್ಟಾಗ್ರಾಂ ಮುಖಾಂತರ ಪರಿಚಯವಾಗಿ ಬಳಿಕ ಪರಸ್ಪರ ಪ್ರೀತಿಸುತ್ತಿದ್ದು, ಆರೋಪಿತನು ಸಂತ್ರಸ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೇ 28ರಂದು ಮಂಗಳೂರಿನ ಹೊಟೇಲ್ ಗೆ ಕರೆದುಕೊಂಡು ಹೋಗಿ ರೂಮ್ ಪಡೆದುಕೊಂಡು
ಸುಮಾರು 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ಆತ ಈ ಹಿಂದೆ ಮದುವೆಯಾಗಿರುವ ವಿಚಾರ ತಿಳಿದು ಬಂತು ಎಂದು ಮಹಿಳಾ ಠಾಣೆಗೆ ನೀಡಿದ ದೂರಿನಲ್ಲಿ ಯುವತಿ ತಿಳಿಸಿದ್ದಾಳೆ.
ಆರೋಪಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ. 52/2023 ಕಲಂ 417, 376, 506 ಐಪಿಸಿ ಯಂತೆ ಕೇಸು ದಾಖಲಾಗಿದೆ.
ಆರೋಪಿ ಅನೀಶ್ ರೆಹಮಾನ್ ನನ್ನು ಮಂಗಳೂರು ನಗರದಲ್ಲಿ ದಸ್ತಗಿರಿ ಮಾಡಿ ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ: 40/2023 ಕಲಂ 27 ಬಿ ಎನ್.ಡಿ.ಪಿ.ಎಸ್. ಆ್ಯಕ್ಸ್ ನಂತೆ ಕೂಡಾ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕ ಲೋಕೇಶ್ ಎ.ಸಿ. ಅವರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು