3:18 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಮಗೆ ಮಾರ್ಗದರ್ಶನ ಮಾಡಲು ಅಣ್ಣಾಮಲೈ ದೊಡ್ಡ ಹೀರೋನಾ?: ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

29/06/2023, 19:16

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಪಕ್ಷದೊಳಗಿನ ಎರಡು ಬಣಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಇದೀಗ ಹೊನ್ನಳ್ಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ರಂಗಪ್ರವೇಶ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಅಸಮಾಧಾನ ಹೊರಗೆಡಹಿದ್ದಾರೆ.
ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿರುವುದೇ ಪಕ್ಷದ ಹೀನಾಯ ಸೋಲಿಗೆ ಕಾರಣ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವರು ನಮಗೆ ಪಾಠ ಮಾಡಲು ಬರುತ್ತಾರೆ. ತಮಿಳುನಾಡಿನಿಂದ ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಕೊಡುತ್ತಾರೆ. ಏನು ಅಣ್ಣಾಮಲೈ ದೊಡ್ಡ ಹೀರೋನಾ? ಎಂದು ಮಾಜಿ ಸಚಿವರಾದ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಸೆಲ್ಯೂಟ್ ಹೊಡೆಯುತ್ತಿದ್ದವರಿಂದ ಬಸವರಾಜ ಬೊಮ್ಮಾಯಿ ಅವರು ಹೇಳಿಸಿಕೊಳ್ಳಬೇಕಾದ ಅನಿವಾರ್ಯತೆ, ಮುಜುಗರ ಸೃಷ್ಟಿಸಿದ್ದರು. ಇವೆಲ್ಲಾ ನನ್ನ ಮಾತುಗಳಲ್ಲ, ಕಾರ್ಯಕರ್ತರ ಭಾವನೆಗಳು ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ಅದನ್ನು ಮತಗಳಾಗಿ ಪರಿವರ್ತನೆ ಮಾಡುವ ಮುಖಗಳು ಬೇಕಲ್ವಾ? ಎಂದು ಅವರು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು