11:16 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲಾದ್ಯಂತ ತ್ಯಾಗ, ಬಲಿದಾನದ ಹಬ್ಬ ಬಕ್ರೀದ್ ಆಚರಣೆ: ಸಾಮೂಹಿಕ ಪ್ರಾರ್ಥನೆ

29/06/2023, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗುರುವಾರ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಣಕಲ್, ಕೊಟ್ಟಿಗೆಹಾರ, ಚಕ್ಕಮಕ್ಕಿ,ಗಬ್ಗಲ್ ಸೇರಿದಂತೆ ಹಲವೆಡೆ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ತ್ಯಾಗ ಬಲಿದಾನದ ಹಬ್ಬದ ಶುಭಾಶಯ ಕೋರಿದರು.


ಕೊಟ್ಟಿಗೆಹಾರದ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಧರ್ಮಗುರು ಅಬ್ದುಲ್ ರೆಹಮಾನ್ ಫೈಝಿ ಮಾತನಾಡಿ’ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಕುರಿ ಬಲಿದಾನ ನೀಡಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ದಾನ ಮಾಡುವ ಮೂಲಕ ಹಾಗೂ ಅಲ್ಲಾಹುಗೆ ಬಲಿದಾನ ನೀಡಿದ ಮಾಂಸವನ್ನು ಮೂರು ಪಾಲು ಮಾಡಿ ಒಂದು ಪಾಲು ತಾವು ಬಳಸಿ ಉಳಿದುದನ್ನು ಬಡವರಿಗೆ ಹಂಚಬೇಕು.ಇದರಿಂದ ಈ ಹಬ್ಬ ಭೇಧಬಾವ ಹೊಂದದೇ ಸಮಾನತೆಯಿಂದ ಹಬ್ಬ ಆಚರಿಸಲಾಗುತ್ತದೆ’ ಎಂದರು. ಅಧ್ಯಕ್ಷ ಮುನೀರ್, ಹಾಜಿ ಟಿ.ಎ.ಖಾದರ್,ಸಿದ್ದಿಕ್, ಹಾಜಿ ಯಾಕೂಬ್,ತನುಕೊಟ್ಟಿಗೆಹಾರ,ಮೊಯಿದ್ದೀನ್, ಮತ್ತಿತರರು ಭಾಗವಹಿಸಿದ್ದರು. ವಿಶೇಷ ಪ್ರಾರ್ಥನೆಯ ಬಳಿಕ ಮುಸ್ಲಿಂ ಬಾಂದವರು ಖಬರ್ ಸ್ತಾನಕ್ಕೆ ತೆರಳಿ ಅಗಲಿದ ಕುಟುಂಬದ ಸದಸ್ಯರಿಗಾಗಿ ವಿಶೇಷವಾಗಿ ಮುಕ್ತಿ ಸಿಗಲೆಂದು ಪ್ರಾರ್ಥಿಸಿದರು. ಕೊಟ್ಟಿಗೆಹಾರ ಸುತ್ತಮುತ್ತಲಿನ ಮುಸ್ಲಿಂ ಭಾಂದವರು ಮಸೀದಿಯಲ್ಲಿ ಸೇರಿದ್ದರು. ಬಣಕಲ್ ಜುಮ್ಮಾ ಮಸೀದಿಯಲ್ಲಿ ದರ್ಮಗುರು ಆರೀಸ್ ಮಾತನಾಡಿ ‘ಬಕ್ರೀದ್ ಹಬ್ಬವು ಸಮಾನತೆಯ ಹಬ್ಬವಾಗಿದ್ದು ಬಡವ ಬಲ್ಲಿದ ಎಂಬ ತಾರತಮ್ಯವಿಲ್ಲದೇ ತಾವೆಲ್ಲರೂ ಒಂದೇ ಎಂಬ ಭಾವೈಕ್ಯತೆಯಿಂದ ಹಬ್ಬ ಆಚರಿಸಲಾಗುತ್ತದೆ.ಬಡವರಿಗೆ ದಾನ ಮಾಡುವುದೇ ಈ ಹಬ್ಬದ ಮೂಲ ಉದ್ದೇಶವಾಗಿದೆ’ ಎಂದರು. ಹಲವು ಮಸೀದಿಗಳಲ್ಲಿ ಕುರಾನ್ ಪಠಿಸಿ ವಿಶೇಷವಾಗಿ ಪ್ರಾರ್ಥಿಸಿದರು. ಬಣಕಲ್ ಸುತ್ತಮುತ್ತ ಮಸೀದಿಗಳಲ್ಲೂ ನಮಾಜ್ ಮಾಡಿ ಪರಸ್ಪರ ಹಬ್ಬದ ಶುಭಾಶಯ ಕೋರಿದರು.ಕೊಟ್ಟಿಗೆಹಾರ,ಗಬ್ಗಲ್, ಬಣಕಲ್, ಬಗ್ಗಸಗೋಡು,ಬೆಟ್ಟಗೆರೆ ಹಳಿಕೆ ಮಸೀದಿಗಳಲ್ಲೂ ಮುಸ್ಲಿಂ ಮಕ್ಕಳು ಹಾಗೂ ಹಿರಿಯರು ಹೊಸ ಬಟ್ಟೆ ತೊಟ್ಟು ಮಸೀದಿಯಲ್ಲಿ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ತೊಡಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು