9:30 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಪೆನ್ನಿನ ಶಕ್ತಿಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್.

01/07/2023, 22:26

ಉಡುಪಿ(reporterkarnataka.com): ಪೆನ್ನಿನಲ್ಲಿ ಇರುವ ಶಕ್ತಿಯನ್ನು ಸರಿಯಾಗಿ ಬಳಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಅಭಿಪ್ರಾಯಪಟ್ಟರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾಧ್ಯಮಗಳು ಆಡಳಿತ ವರ್ಗಕ್ಕೆ ಕಾಣದ ಸಮಾಜ ದಲ್ಲಿನ ಅಂಕುಡೊಂಕುಗಳ ಬಗ್ಗೆ ದೃಷ್ಟಿ ಹರಿಸಬೇಕು. ಮಾಧ್ಯಮ ಮತ್ತು ಆಡಳಿತ ವರ್ಗ ಜೊತೆಯಾಗಿ ಕೆಲಸ ಮಾಡಿದರೆ ಸಮಾಜದ ಏಳಿಗೆಗೆ ಶ್ರಮಿಸಲು ಸಾಧ್ಯವಾಗುತ್ತದೆ ಎಂದರು.
ಮುಖ್ಯ ಭಾಷಣನಕಾರರಾಗಿ ಆಗಮಿಸಿದ ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ಮಾತನಾಡಿ,
ಯಾವುದೇ ಸಂದರ್ಭದಲ್ಲೂ ಪತ್ರಕರ್ತರ ಜಾತಿವಾದಿ, ಕೋಮುವಾದಿ, ಭ್ರಷ್ಟಾಚಾರಿ ಆಗಬಾರದು. ಜಾತಿಯ ಆಧಾರದಲ್ಲಿ ಸುದ್ದಿಯನ್ನು ಮಾಡುವುದು ಮತ್ತು ಬೇರೆ ಧರ್ಮದ ಕಾರಣಕ್ಕೆ ವ್ಯಕ್ತಿಯನ್ನು ಟೀಕೆ ಮಾಡುವುದು ಮಾಧ್ಯಮ ಕ್ಷೇತ್ರಕ್ಕೆ ಮಾಡುವ ಮಹಾದ್ರೋಹ ಎಂದು ಹೇಳಿದರು.
ಪತ್ರಕರ್ತರ ಭ್ರಷ್ಟಾಚಾರಕ್ಕೆ ಒಳಗಾಗದರೆ ಅಂದೇ ಆತನ ಒಳಗಿರುವ ಪತ್ರಕರ್ತ ವೌನವಾಗುತ್ತಾನೆ. ಇಂದು ಸಮಾಜದಲ್ಲಿ ಸತ್ಯ ಹೇಳುವುದೇ ಸತ್ಯ ಹೇಳುವುದೇ ಬಹಳ ದೊಡ್ಡ ಸವಾಲಿನ ಕೆಲಸ ಆಗಿದೆ. ಪತ್ರಕರ್ತರು ಯಾವುದೇ ಒತ್ತಡದ ಸಂದರ್ಭದಲ್ಲೂ ಸತ್ಯವನ್ನು ಹೇಳುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಅಂತಹ ವೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತರ ಜವಾಬ್ದಾರಿಯಾಗಿದೆ ಎಂದು ಅವರು ನುಡಿದರು.
ಜಾಗತಿಕ ಪತ್ರಿಕಾ ಸ್ವಾತಂತ್ರ ಸೂಚ್ಯಂಕದ ಪಟ್ಟಿಯಲ್ಲಿ ಭಾರತ ಈ ವರ್ಷ ಸಾಕಷ್ಟು ಕುಸಿತ ಕಂಡಿದೆ. ಭಾರತದ ಸ್ಥಾನವು 150ರಿಂದ 161ಕ್ಕೆ ಇಳಿಕೆಯಾಗಿದೆ. ನಾವು ಈ ಸೂಚ್ಯಂಕದಲ್ಲಿ ನೆರೆಯ ದೇಶಗಳಿಗಿಂತಲೂ ಹಿಂದೆ ಇದ್ದೇವೆ ಎಂದರು.
ರಾಜಕಾರಣಿಗಳು ಮಾಧ್ಯಮಗಳಲ್ಲಿ ಹೂಡಿಕೆ ಮಾಡುತ್ತಿರುವ ಪರಿಣಾಮ ಇಂದು ನ್ಯೂಸ್‌ಗಳು ವೀವ್ಸ್‌ಗಳಾಗಿ ಬದಲಾಗುತ್ತಿದೆ. ಆ ಮಾಧ್ಯಮದಲ್ಲಿರುವ ಪತ್ರಕರ್ತ ಆ ಪಕ್ಷದ ಪರವಾದ ಹಾಗೂ ವಿರೋಧ ಪಕ್ಷಗಳ ನೆಗೆಟಿವ್ ವೀವ್ಸ್ ಗಳನ್ನೇ ಹೇಳುತ್ತಾನೆ. ಅಲ್ಲಿ ನ್ಯೂಸ್ ಹೆಸರಿನಲ್ಲಿ ವೀವ್ಸ್ ಕೊಡುವ, ಅಭಿಪ್ರಾಯ ಹೇಳುವ ವ್ಯವಸ್ಥೆ ಬರುತ್ತದೆ ಎಂದು ಅವರು ತಿಳಿಸಿದರು.
ನಿಜವಾದ ಪತ್ರಕರ್ತರು ಎಲ್ಲ ವಲಯಗಳಲ್ಲಿ ಆಗುವ ಸರಿ ತಪ್ಪುಗಳ ಆವಲೋಕನ ಮಾಡುವ ಮಾನಸಿಕತೆ ಹಾಗೂ ವಿವೇಚನೆಯನ್ನು ಬೆಳೆಸಿ ಕೊಳ್ಳಬೇಕು. ನಮಗೆ ಯಾವುದೇ ಇಸಂ ಇಲ್ಲ. ನಮಗೆ ಇರಬೇಕಾಗಿರುವುದು ಕೇವಲ ಜರ್ನಲಿಂ. ಅದನ್ನು ಸರಿಯಾಗಿ ಅನುಸರಿಸಿದರೆ ನಮಗೆ ಅನೇಕ ವಿಚಾರಗಳನ್ನು ಎದುರಿಸಬಹುದಾಗಿದೆ ಎಂದು ಅವರು ಹೇಳಿದರು.
ಸರಕಾರಗಳನ್ನು ಎಲ್ಲ ಕಾಲದಲ್ಲೂ ವಿಮರ್ಶೆಗೆ ಒಳಪಡಿಸಬೇಕಾಗಿರುವುದು ಪತ್ರಕರ್ತರ ಹಾಗೂ ಮಾಧ್ಯಮದ ಮುಖ್ಯ ಜವಾಬ್ದಾರಿಯಾಗಿದೆ. ಪತ್ರಕರ್ತರು ತೊಂದರೆಗೆ ಒಳಗಾದವರ ಪರವಾಗಿ ನಿಲ್ಲುವುದು ಕೂಡ ಬಹಳ ಮುಖ್ಯ. ಸಮಾಜದ ಕನ್ನಡಿ ಆಗಿರುವ ಮಾಧ್ಯಮ ಕ್ಷೇತ್ರದಲ್ಲಿರುವ ಒತ್ತಡಗಳನ್ನು ನಿಬಾಯಿಸುವುದೇ ಪತ್ರಕರ್ತನ ಮುಂದಿರುವ ದೊಡ್ಡ ಸವಾಲು ಆಗಿದೆ ಎಂದು ಅವರು ನುಡಿದರು.
ನಾವು ಯಾವತ್ತಿಗೂ ಸತ್ಯ ಹೇಳಲು ಅಂಜಬಾರದು. ಅದಕ್ಕೆ ಅಂಜಿ ಸುಳ್ಳು ಸುದ್ದಿಯ ಪ್ರಚಾರಕರಾದರೆ ನಮಗೂ ಸುಳ್ಳು ಸುದ್ದಿಯ ಪ್ರಚಾರಕಕರಿಗೂ ಯಾವುದೇ ವ್ಯತ್ಯಾಸ ಇರುವುದಿಲ್ಲ. ವ್ಯವಸ್ಥೆಯ ಪರವಾಗಿ ಮಾತನಾಡುವುದು ಸುಲಭ. ಅದರಲ್ಲಿ ಯಾವುದೇ ಸವಾಲು ಇರುವುದಿಲ್ಲ. ಸರಕಾರಗಳನ್ನು ವಿಮರ್ಶೆಗೆ ಒಳಪಡಿಸಬೇಕೆ ಹೊರತು ಹೊಗಳುವ ಕೆಲಸ ಮಾಡಬಾರದು ಎಂದು ಅವರು ಹೇಳಿದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಕಳದ ಹಿರಿಯ ಪತ್ರಕರ್ತ ರಾಧಾಕೃಷ್ಣ ತೋಡಿಕಾನ ಅವರಿಗೆ ಪತ್ರಿಕಾ ದಿನಾಚರಣೆಯ ಗೌರವ ನೀಡಲಾಯಿತು. ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಕರ್ನಾಟಕ ಕಾರ್ನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಅರಾಡಿ ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು