2:18 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿ ಗುದ್ದಾಟ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್ ನಿಂದ ದೆಹಲಿಗೆ ಬುಲಾವ್

02/07/2023, 11:17

ಬೆಂಗಳೂರು (reporter Karnataka.com): ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ನಿಂದ ದೆಹಲಿಗೆ ಬುಲಾವ್ ಬಂದಿದೆ.
ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಚಾರದಲ್ಲಿ ತೀವ್ರಗೊಂಡಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲು ಪಕ್ಷದ ವರಿಷ್ಠರು ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿದ್ದಾರೆ. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸುವ ಹೊಣೆಯನ್ನು ಯಡಿಯೂರಪ್ಪ ಅವರಿಗೆ ವರಿಷ್ಠರು ವಹಿಸುವ ಸಾಧ್ಯತೆಗಳಿವೆ.
ಪಕ್ಷದ ಹೈಕಮಾಂಡ್‌ ಕರೆದಿರುವ ಹಿನ್ನೆಲೆಯಲ್ಲಿ ಭಾನುವಾರ ದೆಹಲಿಗೆ ತೆರಳುತ್ತಿರುವ ಯಡಿಯೂರಪ್ಪ ಅವರು,ಭಾನುವಾರ ದೆಹಲಿಯಲ್ಲೇ ಉಳಿದುಕೊಂಡು ಸೋಮವಾರ ಹಿಂತಿರುಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು