5:20 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೂರಾಡಿ: ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ; ಒಡನಾಡಿಗಳಿಂದ ಅಂತಿಮ ನಮನ

02/07/2023, 20:58

ಬ್ರಹ್ಮಾವರ(reporterkarnataka.com): ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದ ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅವರ ಅಂತ್ಯಕ್ರಿಯೆ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು.

ಪಟ್ಟಾಭಿರಾಮ ಸೋಮಯಾಜಿ ಅವರ ಸಹೋದರಿ ಅನಸೂಯ ಕಲ್ಕೂರ ಅವರ ಮನೆಯ‌ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಟ್ಟಾಭಿಯವರ ಒಡನಾಡಿಗಳಾದ ಪ್ರೊ. ಕೆ. ಪಣಿರಾಜ್, ಕೆ.ಎಲ್. ಅಶೋಕ್, ಉಮರ್ ಯು.ಹೆಚ್., ಕಲ್ಕುಳಿ ವಿಠಲ ಹೆಗಡೆ, ರಾಘವೇಂದ್ರ ಚಾರ್ವಾಕ, ಇದ್ರೀಸ್ ಹೂಡೆ, ಹುಸೈನ್ ಕೋಡಿಬೆಂಗ್ರೆ, ಇರ್ಶಾದುಲ್ಲಾಹ್ ಆದಿಲ್, ಡಾ. ಹಯವದನ ಉಪಾಧ್ಯಾಯ, ಶಾಮರಾಜ್ ಬಿರ್ತಿ, ಶಾರದಾ ಮೂಡುಸಗ್ರಿ, ಜಿ. ವಿಷ್ಣು, ಹಸೀನಾ ಬಾನು, ಶಿವಕುಮಾರ್ ಗುಳಘಟ್ಟ, ಬಾಬು ರಾಜ್, ವಿನ್ಸೆಂಟ್ ಆಳ್ವ, ವಿಕ್ಟರ್ ವಾಝ್, ಲಕ್ಷ್ಮಣ್ ಮತ್ತಿತರರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
ಪಟ್ಟಾಭಿರಾಮ ಸೋಮಯಾಜಿ ಸಹೋದರಿ ಅನಸೂಯ ಕಲ್ಕೂರ, ಸಹೋದರಿ ಪುತ್ರ ಅಂಬರೀಷ್ ಕಲ್ಕೂರ, ಅಣ್ಣ ರಂಗನಾಥ್ ಸೋಮಯಾಜಿ, ಅತ್ತೆ ನಿವೇದಿತಾ ಹಾಗೂ ಕುಟುಂಬದ ಸದಸ್ಯರು ಮತ್ತು ನೆರೆಮನೆಯವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು