1:54 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು