6:54 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಗೋವಾದಲ್ಲಿ ಕಾರ್ಕಳದ ಯೋಗಪಟು ಕವನ ಆಚಾರ್ಯ ಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ

03/07/2023, 12:36

ಉಡುಪಿ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯೋಗಪಟು ಕವನ ಆಚಾರ್ಯ ಅವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು