10:19 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಗೋವಾದಲ್ಲಿ ಕಾರ್ಕಳದ ಯೋಗಪಟು ಕವನ ಆಚಾರ್ಯ ಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ

03/07/2023, 12:36

ಉಡುಪಿ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯೋಗಪಟು ಕವನ ಆಚಾರ್ಯ ಅವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು