3:15 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾ ಮಲೆಕುಡಿಯರ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

03/07/2023, 13:08

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ಮಾಳ ಪೇರಡ್ಕ ಸಮುದಾಯ ಭವನದಲ್ಲಿ ಜರುಗಿತು.
ಪ್ರಧಾನ ಕಾರ್ಯದರ್ಶಿ ಅಶೋಕ್ ಕೆರ್ವಾಶೆ ಅವರು ಆಡಳಿತ ವರದಿ ವಾಚಿಸಿ, ಕೋಶಾಧಿಕಾರಿ ಸುಂದರಿ ಪೇರಡ್ಕ ಲೆಕ್ಕಪತ್ರ ಮಂಡಿಸಿದರು.
ಈ ಸಭೆಯಲ್ಲಿ ಪ್ರಸಕ್ತ ವರ್ಷದ ಬಜೆಟ್, ಅಜೀವ ಸದಸ್ಯತ್ವ ಅಭಿಯಾನ, ಸಿಬ್ಬಂದಿ ನೇಮಕ, ಸಮುದಾಯ ಭವನ ನಿರ್ವಹಣೆ ,ಹಳೆ ಕಟ್ಟಡ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಮಾಲೋಚಿಸಿ ಒಮ್ಮತದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಇತ್ತೀಚಿಗೆ ಮೃತಪಟ್ಟ ಅಹ್ವಾನಿತ ಸದಸ್ಯರಾದ ದೇವಕಿ ಈದು, ಅಜೀವ ಸದಸ್ಯರಾದ ಡೀಕಯ್ಯ ಮುಳಿಕಾರು, ಅಣ್ಣಪ್ಪ ಗೌಡ ಕಬ್ಬಿನಾಲೆ, ಅಶೋಕ್ ಕಬ್ಬಿನಾಲೆ ಇವರಿಗೆ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆಯ ಉಸ್ತುವಾರಿ ಮತ್ತು ಜಾಗೃತಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಗಂಗಾಧರ ಗೌಡ ಹಾಗೂ ನಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಯಾದ ತಾರಾ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು, ರಾಜ್ಯ ಸಂಘಟನಾ ಕಾರ್ಯದರ್ಶಿ ನೋಣಯ್ಯ ಗೌಡ, ಸಂಚಾಲಕ ಡೀಕಯ್ಯ ಗೌಡ, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸುಂದರ ರೆಂಜಾಳ, ಸಹ ಸಂಘಟನಾ ಕಾರ್ಯದರ್ಶಿ ಮನೋಹರ ಕಬ್ಬಿನಾಲೆ, ಸಹ ವಕ್ತಾರ ಶ್ರೀಮತಿ ಸುಜಾತ ಕಬ್ಬಿನಾಲೆ, ಆಹ್ವಾನಿತ ಸದಸ್ಯರು, ಅಜೀವ ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಶ್ರಾವ್ಯ ಕೆರ್ವಾಶೆ ಪ್ರಾರ್ಥಿಸಿ, ವಕ್ತಾರ ದಿನೇಶ್ ಗೌಡ ಸ್ವಾಗತಿಸಿದರು. ಉಪಾಧ್ಯಕ್ಷೆ ಶೋಭಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು