1:29 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಬಿ.ಕೆ. ಹರಿಪ್ರಸಾದ್ ಗೆ ಸೂಕ್ತ ಸ್ಥಾನಮಾನ ನೀಡಿ; ಬಿಲ್ಲವರ ಕಡೆಗಣಿಸಿದರೆ ಸ್ವತಂತ್ರ ಪಕ್ಷ ರಚನೆ: ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ

03/07/2023, 20:12

ಬಂಟ್ವಾಳ(reporterarnataka.com):ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಹುನ್ನಾರ ಕಾಂಗ್ರೆಸ್ ನಲ್ಲಿ ನಡೆಯುತ್ತಿದ್ದು, ಅವರಿಗೆ ತಕ್ಷಣ ಸೂಕ್ತ ಸ್ಥಾನಮಾನ ನೀಡಬೇಕು. ಬಿಲ್ಲವರ ಕಡೆಗಣಿಸುವುದು ಮುಂದುವರಿದರೆ ಸ್ವತಂತ್ರ ಪಕ್ಷ ರಚಿಸಲಾಗುವುದು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದರು.

ಮೆಲ್ಕಾರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರಿಗೆ ತಕ್ಷಣವೇ ಸೂಕ್ತ ಸ್ಥಾನಮಾನ ನೀಡಬೇಕು. ಇಲ್ಲದೇ ಇದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಲ್ಲವ ಸಮಾಜ ಹರಿಪ್ರಸಾದ್ ಅವರ ಬೆಂಬಲಕ್ಕೆ ನಿಲ್ಲಲಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಿಬೇಕು, ಇಲ್ಲದೇ ಹೋದಲ್ಲಿ ಸಮುದಾಯ ಬೀದಿಗಿಳಿಯುವುದು ನಿಶ್ವಿತ ಎಂದು ಸ್ವಾಮೀಜಿ ನುಡಿದರು.
ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ 250 ಕೋಟಿ ರೂಪಾಯಿ ಅನುದಾನ ನೀಡಬೇಕು, ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಾಣ ಮಾಡಬೇಕು, ಬಿಲ್ಲವರು ಹಾಗೂ ಈಡಿಗರ ಕುಲ ಕುಸಬು ಆಗಿರುವ ನೀರಾ ಹಾಗೂ ಸೇಂದಿ ಇಳಿಸುವ ಕಾಯಕಕ್ಕೆ ಸರಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಬಿಲ್ಲವರ ಕುಲಶಾಸ್ತ್ರೀಯ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾಲಯದ ನಾರಾಯಣ ಗುರು ಅಧ್ಯಯನ ಪೀಠಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.
ಮಂಗಳೂರಿನಲ್ಲಿ 9 ಲಕ್ಷ, ಉಡುಪಿಯಲ್ಲಿ 3 ಲಕ್ಷ , ಕಾರವಾರದಲ್ಲಿ 5 ಲಕ್ಷ, ಶಿವಮೊಗ್ಗ ಜಿಲ್ಲೆಯಲ್ಲಿ 5 ಲಕ್ಷ ಬಿಲ್ಲವರು, ಈಡಿಗರು, ನಾಮಧಾರಿಗಳು, ದೀವರು ಇದ್ದರೂ, ಇಲ್ಲಿರುವ 22 ಮತ ಕ್ಷೇತ್ರಗಳಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರನ್ನು ಕಡೆಗಣಿಸಲಾಗಿದೆ. ಇದೇ ರೀತಿ ಕಡೆಗಣಿಸಿದ್ದಲ್ಲಿ ಸ್ವತಂತ್ರ ಪಕ್ಷ ಸ್ಥಾಪಿಸಲು ಬಿಲ್ಲವ ಸಮುದಾಯ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಾಮಂಡಳಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ, ಜಿಲ್ಲಾ ಗೌರವಾಧ್ಯಕ್ಷ ಸಂಜೀವ ಪೂಜಾರಿ, ಜಿಲ್ಲಾ ಅಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಟಿ. ಶಂಕರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು