10:25 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ: ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ರಾಂಕ್ ಪಡೆದ ಜ್ಯೋತಿಗೆ ಉಪನ್ಯಾಸಕರ  ಅಭಿನಂದನೆ   

22/07/2021, 07:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜ್ಯೋತಿ ಚಂದ್ರಮೌಳೇಶ್ವರ ನೂರಕ್ಕೆ ನೂರು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಸುರೇಶ್ ಕೆಂಬವಿಮಠ ತಿಳಿಸಿದ್ದಾರೆ.

ಒಟ್ಟು 30 ವಿದ್ಯಾರ್ಥಿಗಳಿದ್ದು, ಐದು ಅತ್ಯುತ್ತಮ ಶ್ರೇಣಿ ,17 ಪ್ರಥಮ, 7 ದ್ವಿತೀಯ ಮತ್ತು ಒಂದು ಉತ್ತಿರ್ಣ ರಾಗಿದ್ದಾರೆ ಎಂದು ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಅಭಿನಂದಿಸಿದೆ.


Join our WhatsApp group

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ‌‌‌‌‌‌ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ ಒಬ್ಬರು ಉನ್ನತ ಶ್ರೇಣಿ, 5 ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಸಂತೋಷ ಕುಮಾರ ತಂ ವೀರಣ್ಣ ನಾಗರಬೆಂಚಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 554 (92.33) ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. ಅದೇ ರೀತಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 40 ವಿದ್ಯಾರ್ಥಿಗಳಲ್ಲಿ ಇಬ್ಬರು ಉನ್ನತ ಶ್ರೇಣಿ,17 ಪ್ರಥಮ ದರ್ಜೆ, 20 ದ್ವಿತೀಯ ದರ್ಜೆ ,1 ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.

ರವಿಕುಮಾರ ತಂ ರಾಮಣ್ಣ ಚಿಕ್ಕಕಡಬೂರ 600 ಕ್ಕೆ 539(89.33) ಮತ್ತು ಅಜಮಿರ್ ತಂ ಖಾಜಾಸಾಬ ‌600 ಕ್ಕೆ 533 (88.83) ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ಕ್ರಮವಾಗಿ ಕಾಲೇಜಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಪದಾಧಿಕಾರಿಗಳು ,ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದ್ದಾರೆ. ಮಸ್ಕಿಯ ಜಂಗಮ ಸಮಾಜ ಶ್ರೀಮತಿ ಈರಮ್ಮ ಡಾಕ್ಟರ್ ದಯಾನಂದ್ ಹಿರೇಮಠ ಇವರ ಮಗಳು ಕವನ ಹಿರೇಮಠ್ ಪಿಯುಸಿ ಪರೀಕ್ಷೆಯಲ್ಲಿ 99 ಪರ್ಸೆಂಟೇಜ್ 5 94 ಅಂಕ ಪಡೆದು ಸಾಧನೆಗೈದಿದ್ದಾರೆ ಮಸ್ಕಿ ಜಂಗಮ ಸಮಾಜದ ಸಿದ್ದಲಿಂಗಯ್ಯ ಸೊಪ್ಪಿಮಠ ಸೇರಿದಂತೆ ಜಂಗಮ ಮಂಡಳಿ ಸೇರಿದಂತೆ ಮಲ್ಲಿಕಾರ್ಜುನ್ ಸಿಂಧನೂರ್ ಶಾರದಾ ಶಾಲೆ ಮುಖ್ಯೋಪಾಧ್ಯಾಯ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು