1:59 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ: ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ರಾಂಕ್ ಪಡೆದ ಜ್ಯೋತಿಗೆ ಉಪನ್ಯಾಸಕರ  ಅಭಿನಂದನೆ   

22/07/2021, 07:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜ್ಯೋತಿ ಚಂದ್ರಮೌಳೇಶ್ವರ ನೂರಕ್ಕೆ ನೂರು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಸುರೇಶ್ ಕೆಂಬವಿಮಠ ತಿಳಿಸಿದ್ದಾರೆ.

ಒಟ್ಟು 30 ವಿದ್ಯಾರ್ಥಿಗಳಿದ್ದು, ಐದು ಅತ್ಯುತ್ತಮ ಶ್ರೇಣಿ ,17 ಪ್ರಥಮ, 7 ದ್ವಿತೀಯ ಮತ್ತು ಒಂದು ಉತ್ತಿರ್ಣ ರಾಗಿದ್ದಾರೆ ಎಂದು ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಅಭಿನಂದಿಸಿದೆ.


Join our WhatsApp group

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ‌‌‌‌‌‌ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ ಒಬ್ಬರು ಉನ್ನತ ಶ್ರೇಣಿ, 5 ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಸಂತೋಷ ಕುಮಾರ ತಂ ವೀರಣ್ಣ ನಾಗರಬೆಂಚಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 554 (92.33) ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. ಅದೇ ರೀತಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 40 ವಿದ್ಯಾರ್ಥಿಗಳಲ್ಲಿ ಇಬ್ಬರು ಉನ್ನತ ಶ್ರೇಣಿ,17 ಪ್ರಥಮ ದರ್ಜೆ, 20 ದ್ವಿತೀಯ ದರ್ಜೆ ,1 ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.

ರವಿಕುಮಾರ ತಂ ರಾಮಣ್ಣ ಚಿಕ್ಕಕಡಬೂರ 600 ಕ್ಕೆ 539(89.33) ಮತ್ತು ಅಜಮಿರ್ ತಂ ಖಾಜಾಸಾಬ ‌600 ಕ್ಕೆ 533 (88.83) ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ಕ್ರಮವಾಗಿ ಕಾಲೇಜಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಪದಾಧಿಕಾರಿಗಳು ,ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದ್ದಾರೆ. ಮಸ್ಕಿಯ ಜಂಗಮ ಸಮಾಜ ಶ್ರೀಮತಿ ಈರಮ್ಮ ಡಾಕ್ಟರ್ ದಯಾನಂದ್ ಹಿರೇಮಠ ಇವರ ಮಗಳು ಕವನ ಹಿರೇಮಠ್ ಪಿಯುಸಿ ಪರೀಕ್ಷೆಯಲ್ಲಿ 99 ಪರ್ಸೆಂಟೇಜ್ 5 94 ಅಂಕ ಪಡೆದು ಸಾಧನೆಗೈದಿದ್ದಾರೆ ಮಸ್ಕಿ ಜಂಗಮ ಸಮಾಜದ ಸಿದ್ದಲಿಂಗಯ್ಯ ಸೊಪ್ಪಿಮಠ ಸೇರಿದಂತೆ ಜಂಗಮ ಮಂಡಳಿ ಸೇರಿದಂತೆ ಮಲ್ಲಿಕಾರ್ಜುನ್ ಸಿಂಧನೂರ್ ಶಾರದಾ ಶಾಲೆ ಮುಖ್ಯೋಪಾಧ್ಯಾಯ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು