7:47 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ತರೀಕೆರೆ ಶಾಲೆಯಲ್ಲಿ 23 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಲಕ್ಷ್ಮಣ ಮೇಷ್ಟ್ರಿಗೆ ಭರ್ಜರಿ ಬೀಳ್ಕೊಡುಗೆ: ಊರು ತುಂಬಾ ಎತ್ತಿನ ಗಾಡಿಯಲ್ಲಿ ಮೆರವಣಿಗೆ

04/07/2023, 11:26

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 23 ವರ್ಷ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕರಿಗೆ ಭರ್ಜರಿ ಬೀಳ್ಕೊಡುಗೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಲಕ್ಷ್ಮಣ್ ಎನ್.ವಿ. ಅವರು ಕಳೆದ 23 ವರ್ಷಗಳಿಂದ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ವಯೋ ನಿವೃತ್ತರಾಗಿದ್ದು, ಶಿಕ್ಷಕರಿಗೆ ಮಕ್ಕಳಿಂದ ಹೂಮಳೆಗರೆಯಲಾಯಿತು. ಶಿಕ್ಷಕ ನಡೆಯುವ ದಾರಿಯಲ್ಲಿ ಹೂ ಚೆಲ್ಲಿ ಮಕ್ಕಳು ಕೃತಜ್ಞತೆ ಪ್ರದರ್ಶಿಸಿದರು.
ಹಳ್ಳಿಗರು ಸೇರಿ ಮೇಷ್ಟ್ರನ್ನು ಎತ್ತಿಗಾಡಿಯಲ್ಲಿ ಮೆರವಣಿಗೆ ಮಾಡಿದರು. ಸುರಿಯೋ ಮಳೆಯಲ್ಲೇ ಊರಿನ ತುಂಬಾ ಮೆರವಣಿಗೆ ಮಾಡಲಾಯಿತು.


ಪುಟ್ಟ-ಪುಟ್ಟ ಮಕ್ಕಳೇ ವಾದ್ಯ ನುಡಿಸುತ್ತಾ, ಬ್ಯಾಂಡ್ ಬಡಿದುಕೊಂಡು ಶಿಕ್ಷಕರ ಮೆರವಣಿಗೆ ಮಾಡಿದರು.
ಇದಕ್ಕೆ ಮುನ್ನ ವೀರಗಾಸೆ ಮೂಲಕ ಶಿಕ್ಷಕರನ್ನು ಶಾಲೆಗೆ ಹೆಣ್ಣುಮಕ್ಕಳು ಕರೆದು ತಂದರು.
ಇಡೀ ಊರು ತುಂಬಾ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಿಕ್ಷಕ ವೃತ್ತಿಯ ಕೊನೇ ದಿನವಾದ ನಿನ್ನೆ ಶಿಕ್ಷಕ ದಂಪತಿಗೆ ಹಳ್ಳಿಗರು ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು