1:28 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ತರೀಕೆರೆ ಶಾಲೆಯಲ್ಲಿ 23 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಲಕ್ಷ್ಮಣ ಮೇಷ್ಟ್ರಿಗೆ ಭರ್ಜರಿ ಬೀಳ್ಕೊಡುಗೆ: ಊರು ತುಂಬಾ ಎತ್ತಿನ ಗಾಡಿಯಲ್ಲಿ ಮೆರವಣಿಗೆ

04/07/2023, 11:26

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 23 ವರ್ಷ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕರಿಗೆ ಭರ್ಜರಿ ಬೀಳ್ಕೊಡುಗೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಲಕ್ಷ್ಮಣ್ ಎನ್.ವಿ. ಅವರು ಕಳೆದ 23 ವರ್ಷಗಳಿಂದ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ವಯೋ ನಿವೃತ್ತರಾಗಿದ್ದು, ಶಿಕ್ಷಕರಿಗೆ ಮಕ್ಕಳಿಂದ ಹೂಮಳೆಗರೆಯಲಾಯಿತು. ಶಿಕ್ಷಕ ನಡೆಯುವ ದಾರಿಯಲ್ಲಿ ಹೂ ಚೆಲ್ಲಿ ಮಕ್ಕಳು ಕೃತಜ್ಞತೆ ಪ್ರದರ್ಶಿಸಿದರು.
ಹಳ್ಳಿಗರು ಸೇರಿ ಮೇಷ್ಟ್ರನ್ನು ಎತ್ತಿಗಾಡಿಯಲ್ಲಿ ಮೆರವಣಿಗೆ ಮಾಡಿದರು. ಸುರಿಯೋ ಮಳೆಯಲ್ಲೇ ಊರಿನ ತುಂಬಾ ಮೆರವಣಿಗೆ ಮಾಡಲಾಯಿತು.


ಪುಟ್ಟ-ಪುಟ್ಟ ಮಕ್ಕಳೇ ವಾದ್ಯ ನುಡಿಸುತ್ತಾ, ಬ್ಯಾಂಡ್ ಬಡಿದುಕೊಂಡು ಶಿಕ್ಷಕರ ಮೆರವಣಿಗೆ ಮಾಡಿದರು.
ಇದಕ್ಕೆ ಮುನ್ನ ವೀರಗಾಸೆ ಮೂಲಕ ಶಿಕ್ಷಕರನ್ನು ಶಾಲೆಗೆ ಹೆಣ್ಣುಮಕ್ಕಳು ಕರೆದು ತಂದರು.
ಇಡೀ ಊರು ತುಂಬಾ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಿಕ್ಷಕ ವೃತ್ತಿಯ ಕೊನೇ ದಿನವಾದ ನಿನ್ನೆ ಶಿಕ್ಷಕ ದಂಪತಿಗೆ ಹಳ್ಳಿಗರು ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು