1:29 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ

04/07/2023, 19:45

ಸಂತೋಷ್ ಅತ್ತಿಗೆರೆ ಚಿಕ್ಕಮಂಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ 3 ದಿನ ಜುಲೈ 5, 6 ಹಾಗೂ 7ರಂದು ಭಾರೀ ಮಳೆಯಾಗಲಿದ್ದು, ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.
ಹವಾಮಾನ ಇಲಾಖೆ115ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ, ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಪೋಷಕರು, ಶಾಲಾ ಮುಖ್ಯಸ್ಥರು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಹಿರಿಯರು ಹೊರಬಾರದು, ಅನಿವಾರ್ಯವಾದಲ್ಲಿ ಮನೆ ಸದಸ್ಯರ ಜೊತೆ ಹೋಗಬೇಕು. ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನ ಪಾಲಿಸುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು