4:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಖೈಬರ್ ಪಾಸ್ ಗುಡ್ಡ ಕುಸಿತ; ಟ್ರಾಫಿಕ್ ಸಿಗ್ನಲ್ ಢಮಾರ್

05/07/2023, 11:49

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರಿನ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ.

ಮುಂಗಾರು ಆರಂಭವಾಗಿ ಸುಮಾರು 33 ದಿನಗಳ ಬಳಿಕ ಸೋಮವಾರ ಕರಾವಳಿಯಲ್ಲಿ ಬಿರುಸಿನ ಮಳೆ ಬಿದ್ದಿತ್ತು. ಅಂದು ಮಂಗಳೂರಿನಲ್ಲಿ 100 ಮಿಮೀಗೂ ಅಧಿಕ ಮಳೆ ಸುರಿದಿತ್ತು. ಒಂದೇ ದಿನದ ಮಳೆಗೆ ನಗರದ ಉತ್ತರ ದಿಕ್ಕಿನ ಹೆಬ್ಬಾಗಿಲು ಎಂದೇ ಪರಿಗಣಿಸಲಾದ ಪಂಪ್ ವೆಲ್ ಪ್ರದೇಶ ಜಲಾವೃತವಾಗಿತ್ತು. ಇದರಿಂದ ವಾಹನ ಸವಾರರು, ಪಾದಚಾರಿಗಳು ನರಕಯಾತನೆ ಅನುಭವಿಸಿದ್ದಲ್ಲದೆ ಇಡೀ ನಗರವೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ವಾಸ್ತವದಲ್ಲಿ ರಾಜ್ಯದಲ್ಲಿ ಮುಂಗಾರು ಆರಂಭದಿಂದಲೇ ದುರ್ಬಲವಾಗಿತ್ತು. ಜೂನ್ ತಿಂಗಳು ಇಡೀ ಮಳೆ ಇಲ್ಲದೆ ಕಳೆದು ಹೋಯಿತು. ಇದೀಗ ಜುಲೈ ಮೊದಲ ವಾರದಲ್ಲಿ ನಿನ್ನೆ ಮತ್ತು ಮೊನ್ನೆ ಮಂಗಳೂರಿನಲ್ಲಿ ಭಾರಿ ಮಳೆಯಾಗಿದೆ. ಇಂದು ಕೂಡ ಬಿರುಸಿನ ಮಳೆಯಾಗುತ್ತಿದೆ. ಇದರ ಪರಿಣಾಮ ತಗ್ಗು ಪ್ರದೇಶ ಜಲಾವೃತವಾಗಿದೆ. ನಗರದ ಹೃದಯ ಭಾಗದ ಹಂಪನಕಟ್ಟೆ ಯ ಸಿಗ್ನಲ್ ಕೆಟ್ಟು ಹೋಗಿದೆ. ಇದರ ನಿರ್ವಹಣೆ ಮಂಗಳೂರು ಮಹಾನಗರಪಾಲಿಕೆಯದ್ದಾಗಿದೆ. ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಇಲ್ಲಿನ ಹಳೆಯ ಕಟ್ಟಡಕ್ಕೆ ಕುಸಿತದ ಭೀತಿಯುಂಟಾಗಿದೆ.


ರಸ್ತೆ ಹಾಗೂ ಮಳೆ ನೀರು ತೋಡಿನ ಅವೈಜ್ಞಾನಿಕ ಕಾಮಗಾರಿಯಿಂದ ಹಾಗೂ ಅಲ್ಲಲ್ಲಿ ಕಟ್ಟಡ ಕಾಮಗಾರಿಯ ಸಾಮಗ್ರಿಗಳು ತೋಡು ಮುಚ್ಚಿರುವುದರಿಂದ ಕೃತಕ ನೆರೆ ಉಂಟಾಗುತ್ತಿದೆ. ಎಲ್ಲಕ್ಕಿಂತ ಮಿಗಿಲಾಗಿ ರಾಜ ಕಾಲುವೆಗಳ ಒತ್ತುವರಿ ರಸ್ತೆಗೆ ನೀರು ನುಗ್ಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು