6:08 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು: ಭಾರೀ ಗಾಳಿ ಮಳೆಗೆ ಬಿಕರ್ಣಕಟ್ಟೆ ಸಮೀಪ ಉರುಳಿ ಬಿದ್ದ ಬೃಹತ್ ಹೋರ್ಡಿಂಗ್ಸ್; ಪಡೀಲ್ ನಲ್ಲಿ ಹೊಸ ಡಿಸಿ ಕಚೇರಿಗೆ ನೆರೆ!

05/07/2023, 15:18

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕರಾವಳಿಯಲ್ಲಿ ಇಂದು ಕೂಡ ಬಿರುಸಿನ ಮಳೆ ಮುಂದುವರಿದಿದ್ದು, ಬುಧವಾರ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಆವಾಂತರ ಸೃಷ್ಟಿ ಯಾಗಿದೆ.


ಬುಧವಾರ ಬೆಳಗ್ಗಿನ ನಂತರ ಸುರಿದ ಭಾರೀ ಗಾಳಿ ಮಳೆಗೆ ನಗರದ ಹಲವೆಡೆ ವಿದ್ಯುತ್ ಕಂಬ, ಬೃಹತ್ ಹೋರ್ಡಿಂಗ್ಸ್ ಧರಾಶಾಹಿಯಾಗಿದೆ. ನಗರದ ಬಿಕರ್ಣಕಟ್ಟೆ ಬಳಿ ಬೃಹತ್ ಹೋರ್ಡಿಂಗ್ಸ್ ಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕಪ್ಪಳಿಸಿದೆ. ಇದರಿಂದ ಹಲವು ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾರೂ ಇಲ್ಲದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ನಂತೂರು- ಪಡೀಲ್ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಪಡೀಲ್ ಸಮೀಪ ನಿರ್ಮಿಸಿದ ನೂತನ ಜಿಲ್ಲಾಧಿಕಾರಿ ಕಚೇರಿ ಮಂಭಾಗದಲ್ಲಿ ನೆರೆ ಬಂದಿದೆ. ಕದ್ರಿ ಕೈಬಟ್ಟಲ್ ನಲ್ಲಿ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಮೆಸ್ಕಾಂ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿವೆ. ನಗರದ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು