10:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅನಾವೃಷ್ಠಿ: ಉತ್ತರ ಕರ್ನಾಟಕದಲ್ಲಿ ಕೈಕೊಟ್ಟ ಮಳೆ; ಶತಕ ದಾಟಿದ ಟೊಮೆಟೊ, ಮೆಣಸಿನ ಕಾಯಿ ಬೆಲೆ!

05/07/2023, 21:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕರಾವಳಿ ಕರ್ನಾಟಕದಲ್ಲಿ ಅತಿವೃಷ್ಠಿಯಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಅನಾವೃಷ್ಠಿ ತಲೆದೋರಿದೆ.
ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಇಲ್ಲಿನ ರೈತರು, ಕೃಷಿಕರು ಮಳೆರಾಯನ ಆಗಮನಕ್ಕಾಗಿ ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ‌. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಹೌದು ಜುಲೈ ತಿಂಗಳ ಮೊದಲ ವಾರ ಕಳೆಯುತ್ತಾ ಬಂದರೂ ಅಥಣಿ ಹಾಗೂ ಕಾಗವಾಡ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ಉಪಯೋಗವಾಗುತ್ತಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ. ಇನ್ನು ಇದಕ್ಕೂ ಮೊದಲು ಬೆಳೆದಿದ್ದ ಟೊಮೆಟೋ, ಮೆಣಸಿನಕಾಯಿ ಸೇರಿ‌ ಇತರೆ ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಬೆಳಗಾವಿಯಲ್ಲಿ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ನೂರು ರೂಪಾಯಿಗೆ ಮಾರಾಟವಾಗುತ್ತಿವೆ.
ಟೊಮೆಟೋ ಮತ್ತು ಮೆಣಸಿನಕಾಯಿ ದಿನನಿತ್ಯ ಎಲ್ಲರ ಮನೆಯಲ್ಲೂ ಬಳಸುವ ಉತ್ಪನ್ನಗಳು. ಆದರೆ ಅಗತ್ಯಕ್ಕಿಂತ ಕಡಿಮೆ ಉತ್ಪನ್ನ ಮಾರುಕಟ್ಟೆಗೆ ಬಂದಿರುವುದರಿಂದ ಇವುಗಳ ಬೆಲೆ ಗಗನಕ್ಕೇರಿವೆ.

ಇತ್ತೀಚಿನ ಸುದ್ದಿ

ಜಾಹೀರಾತು