1:29 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅನಾವೃಷ್ಠಿ: ಉತ್ತರ ಕರ್ನಾಟಕದಲ್ಲಿ ಕೈಕೊಟ್ಟ ಮಳೆ; ಶತಕ ದಾಟಿದ ಟೊಮೆಟೊ, ಮೆಣಸಿನ ಕಾಯಿ ಬೆಲೆ!

05/07/2023, 21:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕರಾವಳಿ ಕರ್ನಾಟಕದಲ್ಲಿ ಅತಿವೃಷ್ಠಿಯಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಅನಾವೃಷ್ಠಿ ತಲೆದೋರಿದೆ.
ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಇಲ್ಲಿನ ರೈತರು, ಕೃಷಿಕರು ಮಳೆರಾಯನ ಆಗಮನಕ್ಕಾಗಿ ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ‌. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಹೌದು ಜುಲೈ ತಿಂಗಳ ಮೊದಲ ವಾರ ಕಳೆಯುತ್ತಾ ಬಂದರೂ ಅಥಣಿ ಹಾಗೂ ಕಾಗವಾಡ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ಉಪಯೋಗವಾಗುತ್ತಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ. ಇನ್ನು ಇದಕ್ಕೂ ಮೊದಲು ಬೆಳೆದಿದ್ದ ಟೊಮೆಟೋ, ಮೆಣಸಿನಕಾಯಿ ಸೇರಿ‌ ಇತರೆ ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಬೆಳಗಾವಿಯಲ್ಲಿ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ನೂರು ರೂಪಾಯಿಗೆ ಮಾರಾಟವಾಗುತ್ತಿವೆ.
ಟೊಮೆಟೋ ಮತ್ತು ಮೆಣಸಿನಕಾಯಿ ದಿನನಿತ್ಯ ಎಲ್ಲರ ಮನೆಯಲ್ಲೂ ಬಳಸುವ ಉತ್ಪನ್ನಗಳು. ಆದರೆ ಅಗತ್ಯಕ್ಕಿಂತ ಕಡಿಮೆ ಉತ್ಪನ್ನ ಮಾರುಕಟ್ಟೆಗೆ ಬಂದಿರುವುದರಿಂದ ಇವುಗಳ ಬೆಲೆ ಗಗನಕ್ಕೇರಿವೆ.

ಇತ್ತೀಚಿನ ಸುದ್ದಿ

ಜಾಹೀರಾತು