11:52 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಪ್ರವಾಹದ ಪರಿಸ್ಥಿತಿ: ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಸ್ವರ್ಣ, ಸೀತಾ ನದಿ; ಇನ್ನಾದಲ್ಲಿ 3 ಮನೆ ಜಲಾವೃತ

06/07/2023, 19:35

ಕಾರ್ಕಳ(reporterkarnataka.com): ಕಳೆದ 5 ದಿನಗಳಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದು, ಸ್ವರ್ಣ ಹಾಗೂ ಸೀತಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಪಶ್ಚಿಮಘಟ್ಟ ತಪ್ಪಲಿನಲ್ಲಿರುವ ಈ ತಾಲೂಕುಗಳಿಗೆ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆ ನೀರು ಮಾಳ ಮಲ್ಲಾರ್ ಬಳಿ ಸ್ವರ್ಣ ನದಿಗೆ ಭಾರಿ ಪ್ರಮಾಣದಲ್ಲಿ ಸೇರಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಡ್ಲಿ ಅಣೆಕಟ್ಟಿನ ಎಲ್ಲ ಗೇಟ್ ಗಳನ್ನು ತೆರೆಯಲಾಗಿದ್ದು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಮುಂಡ್ಲಿ ಅಣೆಕಟ್ಟಿನ ಸುತ್ತಲೂ ಇರುವ ಗದ್ದೆಗಳಿಗೆ ತೋಟಗಳಿಗೆ ನೀರು ನುಗ್ಗಿದೆ. ಕಾರ್ಕಳ ತಾಲೂಕಿನ ಕೆರುವಾಶೆ, ಎಣ್ಣೆಹೊಳೆ ಹೆರ್ಮುಂಡೆಯ ಸ್ವರ್ಣ ನದಿಯ ತಟದ ಪ್ರದೇಶಗಳಲ್ಲಿ ನೀರು‌ ನುಗ್ಗಿದೆ.

ಹೆಬ್ರಿ ಭಾಗದಲ್ಲಿ ಹರಿಯುವ ಸೀತಾ ನದಿ ಅಪಾಯ ಮಟ್ಟದಲ್ಲಿ ಹರಿಯುತಿದೆ. ನಾಡ್ಪಾಲು ಬಳಿ ರಾಷ್ಟ್ರೀಯ ರಸ್ತೆಯಲ್ಲಿ ಸೀತಾ ನದಿಯ ನೀರು ಹರಿದಿದೆ. ಇದರಿಂದ ಸಂಚಾರ ದುಸ್ತರವಾಗಿದೆ.
ಶಿವಪುರ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿ
ದ್ದು ಬಟ್ರಾಡಿ, ದೊಡ್ಡಮನೆ ಭಾಗದಲ್ಲಿ ನೀರು ಕೃಷಿ ಭತ್ತದ ಗದ್ದೆಗಳಿಗೆ ಆವರಿಸಿದೆ .ಕಬ್ಬಿನಾಲೆ ನದಿಯು ಅಪಾಯಮಟ್ಟದಲ್ಲಿ ಹರಿಯುತ್ತಿದ್ದು
ಧರ್ಮಸ್ಥಳ ಗ್ರಾಮ ಅಭಿವೃದ್ದಿಯ ಹಡಿಭೂಮಿ ಯೋಜನೆ ಯಲ್ಲಿ ವರಂಗದ ಮಾತಿಬೆಟ್ಟು ಸಮೀಪದಲ್ಲಿ ಇಪ್ಪತ್ತು ಹೆಚ್ಚು ಎಕರೆ ಪ್ರದೇಶದಲ್ಲಿ ನಾಟಿ ಮಾಡಲಾಗಿತ್ತು. ಆದರೆ ಕಬ್ಬಿನಾಲೆ ನದಿ ಪ್ರವಾಹದಿಂದ ನೆರೆ ಉಂಟಾಗಿ ಭತ್ತದ ಗದ್ದೆಗಳು ಮುಳುಗಿವೆ. ಇನ್ನಾ ಗ್ರಾಮದಲ್ಲಿ ಮೂರು ಮನೆಗಳು ಜಲಾವೃತವಾಗಿವೆ.
ಕಳೆದ ಎರಡು ವರ್ಷಗಳ ಹಿಂದೆ ಕಾಂಕ್ರಿಟಿಕರಣಗೊಂಡ ಕಬ್ಬಿನಾಲೆ- ತಿಂಗಳ ಮಕ್ಕಿ ಸಂಪರ್ಕಿಸುವ ರಸ್ತೆಯ ಪೊಲ್ಲಂತು ಎಂಬಲ್ಲಿ ಮಳೆಯಿಂದ ಮಣ್ಣಿನ ಸವಕಳಿಯಾಗಿ ರಸ್ತೆಗೆ ಕುಸಿತದ ಭೀತಿ ಉಂಟಾಗಿದೆ. ಸುಮಾರು ಎರಡು ಅಡಿ ಮಣ್ಣು ಕುಸಿದಿದ್ದು ರಸ್ತೆಯ ಎಡಪಾರ್ಶವು ಆಧಾರವಿಲ್ಲದಂತಾಗಿದೆ .
ಅಜೆಕಾರು- ಮಂಗಪಾಡಿ- ಭೂತಮಾರು ರಸ್ತೆಯ ಮರಬಿದ್ದು ತಡೆಗೋಡೆ ಕುಸಿತವಾಗಿದೆ.ಸ್ಥಳಕ್ಕೆ ಅಗಮಿಸಿದ ಅಜೆಕಾರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿಪತ್ತು ನಿರ್ವಹಣಾ ಘಟಕ ಸದಸ್ಯರು ಸ್ಥಳಕ್ಕೆ ಆಗಮಿಸಿ ಮರವನ್ನು ಕತ್ತರಿಸಿ ತೆರವು ಗೊಳಿಸಿದರು
ಮಳೆ ವಿವರ : ಕಾರ್ಕಳ ತಾಲೂಕಿನಲ್ಲಿ ಬುಧವಾರ ಬಾರಿ ಮಳೆ ಸುರಿದಿದ್ದು ಕೆದಿಂಜೆ, 258.00ಮಿಮಿ
ಅತ್ಯಧಿಕ ಮಳೆ ದಾಖಲಾಗಿದೆ. ಸಾಣೂರು195.6 ಮಿಮೀ, ಇರುವತ್ತೂರು 213.2 ಮಿಮೀ, ,ಕಾರ್ಕಳ ನಗರ 247.6 ಮಿಮೀ ಕೆರುವಾಶೆ 196.4ಮಿಮಿ ,ಮುಳಿಕಾರಿನಲ್ಲಿ 209 ಮಿಮೀ, ಅಜೆಕಾರಿನಲ್ಲಿ 231.6 ಮಿಮೀ ಮಳೆಯಾಗಿದೆ.ಹೆಬ್ರಿ179 ಮಿಮೀ, ಕಾರ್ಕಳ ತಾಲೂಕಿನಲ್ಲಿ ಒಟ್ಟು 1551.6 ಮಿಮೀ ಮಳೆ ವರದಿಯಾಗಿದೆ. ಸರಾಸರಿ 221 ಮಿಮೀ ಮಳೆ ಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು