1:22 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸೀಡಿ ಹೋಯ್ತು, ಪೆನ್ ಡ್ರೈವ್ ಬಂತು!: ದಾಖಲೆ ಇದ್ದರೆ ಬಿಡುಗಡೆ ಮಾಡಲು ಏನು ಅಡ್ಡಿ?; ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಚೀಲದೊಳಗಿನ ಹಾವೇ?

06/07/2023, 19:42

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮಾಡಿದ ಜಾತ್ಯತೀತ ಜನತಾ ದಳದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ಇಷ್ಟರವರೆಗೆ ರಾಜಕಾರಣಿಗಳು ಸೀಡಿ ಇಟ್ಡುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆ, ಇದೀಗ ಕುಮಾರಸ್ವಾಮಿ ಅವರು ಅಪ್ ಗ್ರೇಡ್ ಆಗಿ ಪೆನ್ ಡ್ರೈ ತೋರಿಸಿ ನೂತನ ಕಾಂಗ್ರೆಸ್ ಸರಕಾರದ ಜಾತಕ ಹೊರ ಹಾಕುವ ಬೆದರಿಕೆ ಹಾಕಿದ್ದಾರೆ.
ರಾಜ್ಯ ಸರಕಾರದ ವರ್ಗಾವಣೆ ದಂಧೆ ಕುರಿತು ದಾಖಲೆ ಇರುವ ಪೆನ್ ಡ್ರೈವ್ ತನ್ನಲ್ಲಿರುವುದಾಗಿ ಕುಮಾರಸ್ವಾಮಿ ಅವರು ಶರ್ಟ್ ಕಿಸೆಯಿಂದ ತೆಗೆದು ಮಾಧ್ಯಮದ ಕ್ಯಾಮೆರಾ ಮುಂದೆ ಪೆನ್ ಡ್ರೈವ್
ಹಿಡಿದಿದ್ದಾರೆ. ಇಂಧನ ಇಲಾಖೆಯಲ್ಲಿ ವರ್ಗಾವಣೆಯಾಗಿದೆ. 10 ಕೋಟಿ ರೂಪಾಯಿಗೆ ಬಿಕಾರಿಯಾಗಿದೆ. ಅವರ ಒಂದು ದಿನದ ದುಡಿಮೆ 50 ಲಕ್ಷ ರೂ. ನಗರಾಭಿವೃದ್ಧಿ ಇಲಾಖೆಯಲ್ಲಿಯೂ ವರ್ಗಾವಣೆ ದಂಧೆ ನಡೆದಿದೆ. ಸಿಎಂ ಕಚೇರಿಯಲ್ಲಿಯೂ ನಡೆದಿದೆ ಎಂದು ಆರೋಪಿಸಿದ್ದಾರೆ. ವರ್ಗಾವಣೆ ದಂಧೆಯ ಪೆನ್ ಡ್ರೈ ವ್ ಬಿಡುಗಡೆ ಮಾಡಿ ಎಂದು ಮಾಧ್ಯಮದ ಮಂದಿ ಕೇಳಿದಾಗ ಸಮಯ ಬಂದಾಗ ಅಂತ ಹೇಳಿದ್ದಾರೆ. ಹಾಗಾದರೆ ಸಮಯ ಯಾವಾಗ ಬರುತ್ತದೆ? ಅದಕ್ಕೆ ರಾಹು ಕಾಲ, ಗುಳಿಗ ಕಾಲ ನೋಡಲು ಇದೆಯೇ?
ಮಾಜಿ ಮುಖ್ಯಮಂತ್ರಿ ಹೇಳುವುದು ನಿಜವಾಗಿದ್ದರೆ, ನೂತನ ಸರಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆಯುವುದರೊಳಗೆ ಭ್ರಷ್ಟಾಚಾರದಲ್ಲಿ ತೊಡಗಿದ್ದೇ ಆದಲ್ಲಿ ತಪ್ಪಿತಸ್ಥರಿಗೆ
ಅಧಿಕಾರದಲ್ಲಿ ಉಳಿಯುವ ನೈತಿಕತೆ ಇಲ್ಲ. ಕುಮಾರಸ್ವಾಮಿ ಅವರು ಪೆನ್ ಡ್ರೈವ್ ಅನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿ ತಪ್ಪಿತಸ್ಥರನ್ನು ಕಾನೂನಿನ ಕುಣಿಕೆಗೆ ಸಿಗುವಂತೆ ಮಾಡಬೇಕು. ಅದು ಬಿಟ್ಟು, ಚೀಲದಲ್ಲಿ ಹಾವಿದೆ. ಈಗ ಬಿಡುತ್ತೇನೆ. ಮತ್ತೆ ಬಿಡುತ್ತೇನೆ ಅಂದ್ರೆ ಅದು ಹಿಟ್ ಆ್ಯಂಡ್ ರನ್ ಕೇಸ್ ಆಗುತ್ತೆ ಎನ್ನುವುದನ್ನು ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು