11:46 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕರ್ನಾಟಕ ಕಂಡ ಶ್ರೇಷ್ಠ ಬಜೆಟ್; ಅಪರೂಪದಲ್ಲಿ ಅಪರೂಪದ ಮುಂಗಡ ಪತ್ರ: ಮಾಜಿ ಸಚಿವ ರಮಾನಾಥ ರೈ

07/07/2023, 23:13

ಬಂಟ್ವಾಳ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ ಸ್ನೇಹಿ, ಯುವ ಸ್ನೇಹಿ, ರೈತ ಸ್ನೇಹಿ ಬಜೆಟ್ ಕೂಡ ಆಗಿರುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ರೈ ನುಡಿದಿದ್ದಾರೆ.

ಬಜೆಟ್ ನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲನ್ನು ನೀಡಲಾಗಿದೆ. ಎಲ್ಲಾ ಇಲಾಖೆಯಗಳಿಗೂ ಎಲ್ಲಾ ಪ್ರದೇಶಗಳಿಗೂ ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಜಿಲ್ಲೆಗಳಿಗೂ ಎಲ್ಲಾ ವರ್ಗಗಳಿಗೂ ಈ ಬಜೆಟ್ ನ್ಯಾಯ ಒದಗಿಸಿದೆ. ಕರಾವಳಿ ಕರ್ನಾಟಕಕ್ಕೂ ಬಜೆಟ್ ನಲ್ಲಿ ಹೆಚ್ಚು ಆಧ್ಯತೆ ನೀಡಲಾಗಿದೆ. ಕರಾವಳಿಯ ಪ್ರವಾಸೋಧ್ಯಮ ಮತ್ತು ಮೀನುಗಾರ ಸಮುದಾಯಕ್ಕೆ ಬಲ ಕೊಟ್ಟಿದೆ. ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ರಚನೆ, ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿ ಮತ್ತು ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಿರುವುದು ಕರಾವಳಿ ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಮುಂದಕ್ಕೆ ಕೊಂಡೊಯ್ಯಲಿದೆ. ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತವಾಗಿ ನೀಡುವ ಸಾಲವನ್ನು 50 ಸಾವಿರ ರೂಪಾಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಅವರ ಬದುಕು ಹಸನಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ನಾರಾಯಣ ಗುರು ವಸತಿ ಶಾಲೆ ಕೊಟ್ಟಿದ್ದಾರೆ. ಕರಾವಳಿಗೆ ದೊಡ್ಡ ಯೋಜನೆಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರಿಗೆ ಕರಾವಳಿ ಕರ್ನಾಟಕದ ಜನರ ಪರವಾಗಿ ಧನ್ಯವಾದಗಳು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು