8:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ್ದು ನಿರಾಶಾದಾಯಕ ಪೊಳ್ಳು ಬಜೆಟ್: ಶಾಸಕ ವೇದವ್ಯಾಸ ಕಾಮತ್ ಟೀಕೆ

07/07/2023, 23:45

ಮಂಗಳೂರು(reporterkarnataka.com) ಸಿಎಂ ಸಿದ್ದರಾಮಯ್ಯ ಮಂಡಿಸಿದ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆ ಮಾಡದೆ ತೀರಾ ನಿರಾಶಾದಾಯಕವಾಗಿದ್ದು, ಇದೊಂದು ಪೊಳ್ಳು ಬಜೆಟ್ ಆಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಟೀಕಿಸಿದ್ದಾರೆ.
ಬಜೆಟ್ ಮೂಲಕ ಕೇಂದ್ರ ಸರಕಾರವನ್ನು ದೂಷಿಸುವ ಕೆಲಸ ಮಾಡಲಾಗಿದ್ದು ಕೇಂದ್ರ ಸರಕಾರ ಏನು ಮಾಡಿಲ್ಲ ಮತ್ತು ಈ ಹಿಂದಿನ ಬಿಜೆಪಿ ಸರಕಾರ ಈ ರಾಜ್ಯಕ್ಕೆ ಏನೂ ಯೋಜನೆಗಳನ್ನು ಕೊಟ್ಟಿಲ್ಲ ಎಂದು ಬಿಂಬಿಸಲು ಹೊರಟಂತಿದೆ. ಅಲ್ಲದೆ ಮುಂದೆ ನಮ್ಮ ಸರಕಾರಕ್ಕೂ ಏನು ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಈ ಬಜೆಟ್ ಮೂಲಕ ಸರಕಾರ ಒಪ್ಪಿಕೊಂಡಂತಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಇನ್ನು ಕರಾವಳಿಯ ಪಾಲಿಗೆ ಅತ್ಯಂತ ನಿರಾಶದಾಯಕ ಬಜೆಟ್ ಇದಾಗಿದೆ. ಕಾಂಗ್ರೆಸ್ ನವರು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರಾವಳಿಗೆ ಪ್ರತ್ಯೇಕ ಬಜೆಟ್ ನೀಡದೆ ಜನರನ್ನು ವಂಚಿಸಲಾಗಿದೆ. ಯಾವುದೇ ಒಂದು ಹೊಸ ಯೋಜನೆಗಳನ್ನು ಘೋಷಿಸಲಾಗಿಲ್ಲ.
ಇಡೀ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆಗಳಿಲ್ಲದೆ ಹಿಂದಿನ ಬಿಜೆಪಿ ಸರಕಾರದ ಯೋಜನೆಯನ್ನೇ ಮುಂದುವರಿಸಿ ನಮ್ಮದು ಎಂಬಂತೆ ಬಿಂಬಿಸುವ ಕೆಲಸವನ್ನು ಈ ಬಜೆಟ್ ಮೂಲಕ ಮಾಡಲಾಗಿದೆ. ಅಲ್ಲದೆ ಗ್ಯಾರೆಂಟಿ ಯೋಜನೆಗಳ ವೈಭವೀಕರಣವನ್ನು ಮಾಡಲಾಗಿದ್ದು, ರಾಜ್ಯಕ್ಕೆ ಈ ಬಜೆಟ್ ನಿಂದ ನ್ಯಾಯ ಪೈಸೆ ಉಪಯೋಗ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು