4:10 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರೀಕ್ಷೆ ಹುಸಿಗೊಳಿಸಿದ ಬಜೆಟ್: ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಟೀಕೆ

07/07/2023, 23:50

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್ಟಿನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ.
ದ.ಕ ಜಿಲ್ಲೆ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹೇಳಿದ್ದಾರೆ.
ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಯಾವುದೇ ಘೋಷಣೆಗಳಿಲ್ಲ, ಅತಿಥಿ ಶಿಕ್ಷಕರ, ಉಪನ್ಯಾಸಕರ ಖಾಯಮಾತಿಗೆ ಯಾವುದೇ ಚಕಾರ ಎತ್ತದ ಬಜೆಟ್ ಮಂಡಿಸಿದ್ದಾರೆ.
ಬಿಬಿಎಂಪಿ ಚುನಾವಣೆಯ ದೃಷ್ಟಿಕೋನದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೊಟ್ಟು ಇತರ ನಗರದ ಜನರಿಗೆ ಅನ್ಯಾಯ ಮಾಡಲಾಗಿದೆ.
ಹೊಸ ಶಿಕ್ಷಣ ನೀತಿಯನ್ನು ರದ್ದೂಗೊಳಿಸಿರುವುದು ಮತ್ತು ಕೇಂದ್ರ ರದ್ದುಪಡಿಸಿದ್ದ ಎಪಿಎಂಸಿ ಕಾಯ್ದೆಯನ್ನು ವಾಪಸ್ ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ ಆದರೆ ಐದು ಗ್ಯಾರೆಂಟಿಗಳಿಗೆ ಹಣ ಹೊಂದಿಸುವ ಭರದಲ್ಲಿ ಮತ್ತು ರಾಜಸ್ವ ಸಂಗ್ರಹದಲ್ಲಿ ಹೆಚ್ಚಳ ಮಾಡುವ ತರಾತುರಿಯಲ್ಲಿ ಅಬಕಾರಿ, ಸ್ಟ್ಯಾಂಪಿಗ್, ದ್ವಿಚಕ್ರ ಮತ್ತು ಇತರ ವಾಣಿಜ್ಯ ವಾಹನಗಳ ಮೇಲಿನ ತೆರಿಗೆ ಏರಿಕೆ ಮಾಡಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಬಜೆಟ್ ಮಂಡಿಸಿದ್ದಾರೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು