11:52 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಅಕ್ರಮ ಆಸ್ತಿ ಪ್ರಕರಣ: ಸರಕಾರಿ ಅಧಿಕಾರಿಗೆ1 ವರ್ಷ ಸಜೆ, 1 ಲಕ್ಷ ರೂ. ದಂಡ

07/07/2023, 23:58

ಉಡುಪಿ (reporter Karnataka.com): ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿದ ಸರಕಾರಿ ಅಧಿಕಾರಿಗೆ ಜಿಲ್ಲಾ ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಸರಕಾರಿ ಅಧಿಕಾರಿಯಾದ ಆರೋಪಿ ಅಬ್ದುಲ್ ಅಜೀಜ್ ಅವರು ಕುಂದಾಪುರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ಬಗ್ಗೆ ಅಂದಿನ ಪಿ.ಐ ಕೆ.ಯು. ಬೆಳ್ಳಿಯಪ್ಪ ಅವರು ಮಾಹಿತಿಯನ್ನು ಸಂಗ್ರಹಿಸಿ, ಪರ‍್ಯಾದಿ ನೀಡಿದ ಮೇರೆಗೆ ಅಂದಿನ ಮಂಗಳೂರು ಪೊಲೀಸ್ ವಿಭಾಗದ ಎಸ್.ಪಿ. ಧರ್ಮರಾಜ್ ಎ.ಜಿ. ರವರು ಪ್ರಕರಣ ದಾಖಲಿಸಿ, ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಆಪಾದಿತರ ಮನೆ ಶೋಧ ನಡೆಸಲು ಸರ್ಚ್ ವಾರೆಂಟ್ ಪಡೆದು ಎಸ್.ಪಿ. ಹಾಗೂ ಉಡುಪಿಯ ಪ್ರಭಾರ ಡಿ,ವೈ.ಎಸ್.ಪಿ. ರವರು ಆಪಾದಿತ ಸರಕಾರಿ ಅಧಿಕಾರಿಯವರ ಮನೆ ಹಾಗೂ ಬ್ಯಾಂಕ್ ಲಾಕರ್‌ಗಳನ್ನು ಪರಿಶೀಲನೆ ನಡೆಸಿರುತ್ತಾರೆ.
ಪ್ರಕರಣದ ಮುಂದಿನ ತನಿಖೆ ಕೈಗೊಂಡ ಲೋಕಾಯುಕ್ತ ಡಿ.ವೈಎಸ್.ಪಿ. ಪ್ರಭುದೇವ ಬಿ. ಮಾನೆ, ಆಪಾದಿತ ಸರಕಾರಿ ಅಧಿಕಾರಿಯು ಹೆಚ್ಚಿನ ಪ್ರಮಾಣದಲ್ಲಿ ಹೊಂದಿದ ಆಸ್ತಿಯ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿ, ತನಿಖೆಯನ್ನು ಕ್ಲಪ್ತ ಸಮಯದಲ್ಲಿ ಪೂರ್ತಿಗೊಳಿಸಿ, ಅಂತಿಮ ವರದಿಯನ್ನು ಆಪಾದಿತರ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿರುತ್ತಾರೆ.
ಲೋಕಾಯುಕ್ತ ಡಿ.ವೈಎಸ್.ಪಿ ಸದಾನಂದ ವರ್ಣೇಕರ್ ಇವರು ಆಪಾದಿತ ಸರಕಾರಿ ಅಧಿಕಾರಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು, ಆರೋಪ ಸಾಬೀತಾದ ಹಿನ್ನೆಲೆ, ನಗರದ ಜಿಲ್ಲಾ ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಆರೋಪಿ ಅಬ್ದುಲ್ ಅಜೀಜ್‌ಗೆ ಕಲಂ. 13(1)(ಇ), 13(2) ಪಿ.ಸಿ. ಕಾಯಿದೆ 1988 ರಲ್ಲಿ 1 ವರ್ಷಗಳ ಸಾದಾ ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ. ಪ್ರಸ್ತುತ ಅಬ್ದುಲ್ ಅಜೀಜ್ ಇವರು ನಿವೃತ್ತಿಯಾಗಿರುತ್ತಾರೆ.
ಸರಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಟಿ. ವಿಜಯ ಕುಮಾರ್ ಶೆಟ್ಟಿ ವಾದ ಮಂಡಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು