2:19 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಕ್ರಮ ಆಸ್ತಿ ಪ್ರಕರಣ: ಸರಕಾರಿ ಅಧಿಕಾರಿಗೆ1 ವರ್ಷ ಸಜೆ, 1 ಲಕ್ಷ ರೂ. ದಂಡ

07/07/2023, 23:58

ಉಡುಪಿ (reporter Karnataka.com): ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿದ ಸರಕಾರಿ ಅಧಿಕಾರಿಗೆ ಜಿಲ್ಲಾ ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಸರಕಾರಿ ಅಧಿಕಾರಿಯಾದ ಆರೋಪಿ ಅಬ್ದುಲ್ ಅಜೀಜ್ ಅವರು ಕುಂದಾಪುರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ಬಗ್ಗೆ ಅಂದಿನ ಪಿ.ಐ ಕೆ.ಯು. ಬೆಳ್ಳಿಯಪ್ಪ ಅವರು ಮಾಹಿತಿಯನ್ನು ಸಂಗ್ರಹಿಸಿ, ಪರ‍್ಯಾದಿ ನೀಡಿದ ಮೇರೆಗೆ ಅಂದಿನ ಮಂಗಳೂರು ಪೊಲೀಸ್ ವಿಭಾಗದ ಎಸ್.ಪಿ. ಧರ್ಮರಾಜ್ ಎ.ಜಿ. ರವರು ಪ್ರಕರಣ ದಾಖಲಿಸಿ, ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಆಪಾದಿತರ ಮನೆ ಶೋಧ ನಡೆಸಲು ಸರ್ಚ್ ವಾರೆಂಟ್ ಪಡೆದು ಎಸ್.ಪಿ. ಹಾಗೂ ಉಡುಪಿಯ ಪ್ರಭಾರ ಡಿ,ವೈ.ಎಸ್.ಪಿ. ರವರು ಆಪಾದಿತ ಸರಕಾರಿ ಅಧಿಕಾರಿಯವರ ಮನೆ ಹಾಗೂ ಬ್ಯಾಂಕ್ ಲಾಕರ್‌ಗಳನ್ನು ಪರಿಶೀಲನೆ ನಡೆಸಿರುತ್ತಾರೆ.
ಪ್ರಕರಣದ ಮುಂದಿನ ತನಿಖೆ ಕೈಗೊಂಡ ಲೋಕಾಯುಕ್ತ ಡಿ.ವೈಎಸ್.ಪಿ. ಪ್ರಭುದೇವ ಬಿ. ಮಾನೆ, ಆಪಾದಿತ ಸರಕಾರಿ ಅಧಿಕಾರಿಯು ಹೆಚ್ಚಿನ ಪ್ರಮಾಣದಲ್ಲಿ ಹೊಂದಿದ ಆಸ್ತಿಯ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿ, ತನಿಖೆಯನ್ನು ಕ್ಲಪ್ತ ಸಮಯದಲ್ಲಿ ಪೂರ್ತಿಗೊಳಿಸಿ, ಅಂತಿಮ ವರದಿಯನ್ನು ಆಪಾದಿತರ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿರುತ್ತಾರೆ.
ಲೋಕಾಯುಕ್ತ ಡಿ.ವೈಎಸ್.ಪಿ ಸದಾನಂದ ವರ್ಣೇಕರ್ ಇವರು ಆಪಾದಿತ ಸರಕಾರಿ ಅಧಿಕಾರಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು, ಆರೋಪ ಸಾಬೀತಾದ ಹಿನ್ನೆಲೆ, ನಗರದ ಜಿಲ್ಲಾ ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಆರೋಪಿ ಅಬ್ದುಲ್ ಅಜೀಜ್‌ಗೆ ಕಲಂ. 13(1)(ಇ), 13(2) ಪಿ.ಸಿ. ಕಾಯಿದೆ 1988 ರಲ್ಲಿ 1 ವರ್ಷಗಳ ಸಾದಾ ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ. ಪ್ರಸ್ತುತ ಅಬ್ದುಲ್ ಅಜೀಜ್ ಇವರು ನಿವೃತ್ತಿಯಾಗಿರುತ್ತಾರೆ.
ಸರಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಟಿ. ವಿಜಯ ಕುಮಾರ್ ಶೆಟ್ಟಿ ವಾದ ಮಂಡಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು