7:57 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜುಲೈ 9 ಮತ್ತು 10: ಬೀದಿ ಬೈಲೂರು ಮಹಾಲಿಂಗೇಶ್ವರ ದೇವಸ್ಥಾನ ಸಾನ್ನಿಧ್ಯ ಸಂಕೋಚ ಹಾಗೂ ಶಿಲಾ ಮೆರವಣಿಗೆ

08/07/2023, 12:17

ಬೈಲೂರು(reporterkarnataka.com): ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಶ್ರೀ ಮಹಾಲಿಂಗೇಶ್ವರ ದೇವರ
ಸಾನ್ನಿಧ್ಯ ಸಂಕೋಚ ಕಾರ್ಯಕ್ರಮ ಜು.9 ಮತ್ತು 10 ರಂದು ಬ್ರಹ್ಮಶ್ರೀ ಬೈಲೂರು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮಗಳು: ಜು.9 ರಂದು ಸಾಯಂಕಾಲ 5ರಿಂದ ದೇವತಾ ಪ್ರಾರ್ಥನೆ, ಪುಣ್ಯಹವಾಚನ, ಮೂಲಾಲಯದಲ್ಲಿ ವಾಸ್ತು ಪೂಜಾ, ಬಲಿ, ವಾಸ್ತು ಹೋಮ, ಪ್ರಾಕಾರ ಬಲಿ, ಬಾಲಾಲಯದಲ್ಲಿ ಸಪ್ತಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಬಲಿ, ವಾಸ್ತು ಹೋಮ, ಪ್ರಾಕಾರ ಬಲಿ ನಡೆಯಲಿದೆ.
ಜು. 10ರಂದು ಬೆಳಿಗ್ಗೆ 5:30ರಿಂದ ಪುಣ್ಯಹವಾಚನ, ಗಣಯಾಗ, ಪಂಚವಿಂಶತಿ, ಕಲಶ ಪ್ರಧಾನ ಹೋಮ, ಸಂಹಾರ ತತ್ವ ಹೋಮ, ಗಣಪತಿ ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶಾಭಿಷೇಕ, ಪ್ರಸನ್ನ ಪೂಜೆ, 8:30 ಕ್ಕೆ ಸಂಕೋಚ ಕಲಶಾಭಿಷೇಕ ಮಹಾಲಿಂಗೇಶ್ವರ ದೇವರ ಧ್ಯಾನ ಸಂಕೋಚ, ಮಹಾ ಗಣಪತಿ ದೇವರ ಬಿಂಬ ಬಾಲಾಲಯ ಪ್ರತಿಷ್ಠೆ,ಶಿಲಾ ಮುಹೂರ್ತ, ಪ್ರಸಾದ ವಿತರಣೆ ನಡೆಯಲಿದೆ. ಪುಣ್ಯ ಕಾರ್ಯದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಜೀಣೋದ್ಧಾರ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಗ್ರಾಮಸ್ಥರು ವಿನಂತಿಸಿದ್ದಾರೆ.
ಶಿಲಾ ಮೆರವಣಿಗೆ: ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾಮುಹೂರ್ತದ ಪೂರ್ವಭಾವಿಯಾಗಿ ಶಿಲಾ ಮೆರವಣಿಗೆಯು ಜು.9 ರಂದು ಬೆಳಿಗ್ಗೆ 9:30ಕ್ಕೆ ಸರಿಯಾಗಿ ಬೈಲೂರು ಕೆಳಪೇಟೆಯಿಂದ ನಡೆಯಲಿದೆ. ಮೆರವಣಿಗೆಯಲ್ಲಿ ಪೂರ್ಣಕುಂಭದೊಂದಿಗೆ ಮಹಿಳೆಯರು, ಭಜನಾ ತಂಡಗಳು, ಕೆರಳ ಚೆಂಡೆ ಹಾಗೂ ಸ್ಥಳೀಯ ಚೆಂಡೆ ತಂಡಗಳು ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು