4:02 AM Saturday25 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ಜುಲೈ 9 ಮತ್ತು 10: ಬೀದಿ ಬೈಲೂರು ಮಹಾಲಿಂಗೇಶ್ವರ ದೇವಸ್ಥಾನ ಸಾನ್ನಿಧ್ಯ ಸಂಕೋಚ ಹಾಗೂ ಶಿಲಾ ಮೆರವಣಿಗೆ

08/07/2023, 12:17

ಬೈಲೂರು(reporterkarnataka.com): ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಶ್ರೀ ಮಹಾಲಿಂಗೇಶ್ವರ ದೇವರ
ಸಾನ್ನಿಧ್ಯ ಸಂಕೋಚ ಕಾರ್ಯಕ್ರಮ ಜು.9 ಮತ್ತು 10 ರಂದು ಬ್ರಹ್ಮಶ್ರೀ ಬೈಲೂರು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮಗಳು: ಜು.9 ರಂದು ಸಾಯಂಕಾಲ 5ರಿಂದ ದೇವತಾ ಪ್ರಾರ್ಥನೆ, ಪುಣ್ಯಹವಾಚನ, ಮೂಲಾಲಯದಲ್ಲಿ ವಾಸ್ತು ಪೂಜಾ, ಬಲಿ, ವಾಸ್ತು ಹೋಮ, ಪ್ರಾಕಾರ ಬಲಿ, ಬಾಲಾಲಯದಲ್ಲಿ ಸಪ್ತಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಬಲಿ, ವಾಸ್ತು ಹೋಮ, ಪ್ರಾಕಾರ ಬಲಿ ನಡೆಯಲಿದೆ.
ಜು. 10ರಂದು ಬೆಳಿಗ್ಗೆ 5:30ರಿಂದ ಪುಣ್ಯಹವಾಚನ, ಗಣಯಾಗ, ಪಂಚವಿಂಶತಿ, ಕಲಶ ಪ್ರಧಾನ ಹೋಮ, ಸಂಹಾರ ತತ್ವ ಹೋಮ, ಗಣಪತಿ ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶಾಭಿಷೇಕ, ಪ್ರಸನ್ನ ಪೂಜೆ, 8:30 ಕ್ಕೆ ಸಂಕೋಚ ಕಲಶಾಭಿಷೇಕ ಮಹಾಲಿಂಗೇಶ್ವರ ದೇವರ ಧ್ಯಾನ ಸಂಕೋಚ, ಮಹಾ ಗಣಪತಿ ದೇವರ ಬಿಂಬ ಬಾಲಾಲಯ ಪ್ರತಿಷ್ಠೆ,ಶಿಲಾ ಮುಹೂರ್ತ, ಪ್ರಸಾದ ವಿತರಣೆ ನಡೆಯಲಿದೆ. ಪುಣ್ಯ ಕಾರ್ಯದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಜೀಣೋದ್ಧಾರ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಗ್ರಾಮಸ್ಥರು ವಿನಂತಿಸಿದ್ದಾರೆ.
ಶಿಲಾ ಮೆರವಣಿಗೆ: ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾಮುಹೂರ್ತದ ಪೂರ್ವಭಾವಿಯಾಗಿ ಶಿಲಾ ಮೆರವಣಿಗೆಯು ಜು.9 ರಂದು ಬೆಳಿಗ್ಗೆ 9:30ಕ್ಕೆ ಸರಿಯಾಗಿ ಬೈಲೂರು ಕೆಳಪೇಟೆಯಿಂದ ನಡೆಯಲಿದೆ. ಮೆರವಣಿಗೆಯಲ್ಲಿ ಪೂರ್ಣಕುಂಭದೊಂದಿಗೆ ಮಹಿಳೆಯರು, ಭಜನಾ ತಂಡಗಳು, ಕೆರಳ ಚೆಂಡೆ ಹಾಗೂ ಸ್ಥಳೀಯ ಚೆಂಡೆ ತಂಡಗಳು ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು