1:13 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ಮನೆಯೊಂದು ಆರು ಬಾಗಿಲು ಪರಿಸ್ಥಿತಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಟೀಕೆ

08/07/2023, 18:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯ ಬಿಜೆಪಿಯದ್ದು ಮನೆಯೊಂದು ಆರು ಬಾಗಿಲು ಪರಿಸ್ಥಿತಿ. ವಿಧಾನಸಭೆ ಅಧಿವೇಶನ ಆರಂಭವಾಗಿ ಮೂರು ದಿನಗಳು ಕಳೆದರು ಬಿಜೆಪಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ಲೇವಡಿ ಮಾಡಿದರು.
ಅಥಣಿ ತಾಲೂಕಿನ ಹಲ್ಯಾಳ ಗ್ರಾಮ ಕರಿಮಸೂತಿ ನೀರಾವರಿ ಯೋಜನೆಯ ಕಾಲುವೆಗೆ ನೀರು ಹರಿಸಿ ಮಾಧ್ಯಮ ಜತೆ ಅವರು ಮಾತನಾಡಿದರು.


ಬರದಿಂದ ತತ್ತರಿಸಿದ ಜನರಿಗೆ ಖುಷಿ ಹಂಚಿದ ಲಕ್ಷ್ಮಣ್ ಸವದಿ, ಬಿಜೆಪಿ ರಾಷ್ಟ್ರೀಯ ಪಕ್ಷ ವಿದ್ದರೂ ವಿಪಕ್ಷ ನಾಯಕನ ಕೊರತೆ ಎದುರಿಸುತ್ತಿದೆ.
ಬಿಜೆಪಿ ಪಕ್ಷದಲ್ಲಿ ಒಗ್ಗಟ್ಟಿಲ್ಲದ್ದು ಅದರ ಹೀನಾಯ ಸೋಲಿಗೆ ಕಾರಣ ಎಂದರು.
ಸಿದ್ದರಾಮಯ್ಯ ಬಜೆಟ್ ಸರ್ವರಿಗೂ ಸಮಪಾಲು ಸಮಬಾಳು ನೀಡುವಂತದ್ದು.
ನೀರಾವರಿಗೂ ಹೆಚ್ಚಿನ ಕೊಡುಗೆ ನೀಡಲಾಗಿದೆ. ಅಥಣಿ ಹಾಗೂ ಕಾಗವಾಡ ತಾಲೂಕಿನ ನೀರಾವರಿ ಯೋಜನೆಗೆ ಹೆಚ್ಚಿನ ಒಲವು ನೀಡುವ ಭರವಸೆ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ 30 ಸಾವಿರ ಕೋಟಿ ಬೆಳೆ ಸಾಲ ಕೊಡುವ ಭರವಸೆಯನ್ನು ಶಾಸಕ ಲಕ್ಷ್ಮಣ್ ಸವದಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು