4:44 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

BSY Resignation | ಬಿಎಸ್‌ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’

22/07/2021, 12:46

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್​ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಸ್ವತಃ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಜುಲೈ 26 ರಂದು ರಾಜೀನಾಮೆ ನೀಸುವುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಹೌದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್​ವೈ, ಜುಲೈ 25ರಂದು ವರಿಷ್ಠರ ಸೂಚನೆ ಬರುತ್ತೆ, ಜುಲೈ 26ರಿಂದ ಹೈಕಮಾಂಡ್​ ಸೂಚನೆಯಂತೆ ನಡೆಯುವೆ, ಹೈಕಮಾಂಡ್​ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ, ಹೈಕಮಾಂಡ್​ ತೀರ್ಮಾನವೇ ನನ್ನ ತೀರ್ಮಾನ, ನಮ್ಮ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕೊಟ್ಟಿಲ್ಲ, ಆದರೂ ನನಗೆ ವರಿಷ್ಠರು ಅವಕಾಶ ನೀಡಿದ್ದರು. ಅವರು ಕೊಟ್ಟ ಅವಕಾಶವನ್ನು ಸಮರ್ಥವಾಗಿ ಬಳಸಿದ್ದೇನೆ, ಪಕ್ಷ ಮತ್ತು ನಾಡಿನ ಜನರ ಹಿತಕ್ಕಾಗಿ ದುಡಿದಿದ್ದೇನೆ, ನನ್ನ ಪರ ಯಾರೂ ಪ್ರತಿಭಟನೆ, ಹೋರಾಟ ಮಾಡ್ಬೇಡಿ ಎಂದು ರಾಜೀನಾಮೆ ಬಗ್ಗೆ ರಾಜ್ಯದ ಜನರಿಗೆ ಸೂಚನೆಯನ್ನೂ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು