10:48 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

BSY Resignation | ಬಿಎಸ್‌ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’

22/07/2021, 12:46

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್​ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಸ್ವತಃ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಜುಲೈ 26 ರಂದು ರಾಜೀನಾಮೆ ನೀಸುವುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಹೌದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್​ವೈ, ಜುಲೈ 25ರಂದು ವರಿಷ್ಠರ ಸೂಚನೆ ಬರುತ್ತೆ, ಜುಲೈ 26ರಿಂದ ಹೈಕಮಾಂಡ್​ ಸೂಚನೆಯಂತೆ ನಡೆಯುವೆ, ಹೈಕಮಾಂಡ್​ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ, ಹೈಕಮಾಂಡ್​ ತೀರ್ಮಾನವೇ ನನ್ನ ತೀರ್ಮಾನ, ನಮ್ಮ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕೊಟ್ಟಿಲ್ಲ, ಆದರೂ ನನಗೆ ವರಿಷ್ಠರು ಅವಕಾಶ ನೀಡಿದ್ದರು. ಅವರು ಕೊಟ್ಟ ಅವಕಾಶವನ್ನು ಸಮರ್ಥವಾಗಿ ಬಳಸಿದ್ದೇನೆ, ಪಕ್ಷ ಮತ್ತು ನಾಡಿನ ಜನರ ಹಿತಕ್ಕಾಗಿ ದುಡಿದಿದ್ದೇನೆ, ನನ್ನ ಪರ ಯಾರೂ ಪ್ರತಿಭಟನೆ, ಹೋರಾಟ ಮಾಡ್ಬೇಡಿ ಎಂದು ರಾಜೀನಾಮೆ ಬಗ್ಗೆ ರಾಜ್ಯದ ಜನರಿಗೆ ಸೂಚನೆಯನ್ನೂ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು