11:19 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತುಳುನಾಡಿನ ದೈವಾರಾಧನೆಯ ನಿಂದನೆ, ಮಹಿಳೆಯರ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿ ಬೆಂಗಳೂರು ನಿವಾಸಿಯ ಬಂಧನ

08/07/2023, 22:36

ಮಂಗಳೂರು(reporterkarnataka.com): ತುಳುನಾಡಿನ ದೈವಾರಾಧನೆ ನಿಂಧನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಟ್ವಿಟರ್ ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ (ರಿ) ನೀಡಿದ ದೂರಿನಂತೆ ಸೆನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತುಮ ಪ್ರಕರಣ ಆರೋಪಿಯಾದ ಬೆಂಗಳೂರಿನ ಜಕ್ಕೂರ್ ಅಮೃತಹಳ್ಳಿ ನಿವಾಸಿ ಶಿವರಾಜ್ ಎಚ್.ಕೆ.(37 ) ಎಂಬಾತನನ್ನು ದಸ್ತಗಿರಿ ಮಾಡಿ ಮಂಗಳೂರಿನ
7ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ಕುಲದೀಪ್ ಕುಮಾರ್ ಆರ್ ಜೈನ್ ಅವರ ಮಾರ್ಗದರ್ಶನದಂತೆ, ಸಿಸಿಬಿ ಘಟಕದ ಎಸಿಪಿಯವರಾದ ಪಿ. ಎ. ಹೆಗ್ಡೆ ಅವರ ನೇತೃತ್ವದಲ್ಲಿ, ಮಂಗಳೂರು ನಗರ ಸನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸತೀಶ್ ಎಂ.ಪಿ. ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು