3:13 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸಮೀಪ ಯದ್ವಾತದ್ವಾ ಚಲಿಸಿ ಡಿಕ್ಕಿ ಹೊಡೆದ ಕಾರು: 3 ಹಸುಗಳ ದಾರುಣ ಸಾವು, ಕರು ಚಿಂತಾಜನಕ; ಕಾರು ವೈದ್ಯರದ್ದೇ?

09/07/2023, 13:42

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ
ಕುತ್ತಾರು ಪಂಡಿತ್ ಹೌಸ್ ಬಳಿ ಯದ್ವಾತದ್ವಾ ಚಲಿಸಿದ ಕಾರೊಂದು ಬಾಯಿ ಬಾರದ ಮೂರು ಹಸುಗಳನ್ನು ಬಲಿ ಪಡೆದು, ಕರುವೊಂದನ್ನು ಗಂಭೀರವಾಗಿ ಗಾಯಗೊಳಿಸಿ ಪಲ್ಟಿಯಾದ ಭಯಾನಕ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಯುವಕ ಹಾಗೂ ಯುವತಿಯರಿದ್ದ ಕ್ರೆಟಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೂರು ಗೋವುಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮುಂಜಾನೆ 3.45ರ ವೇಳೆ ಘಟನೆ ನಡೆದಿದೆ.
ದೇರಳಕಟ್ಟೆಯಿಂದ ತೊಕ್ಕೊಟ್ಟಿನ ಕಡೆ ಧಾವಿಸುತ್ತಿದ್ದ ಕ್ರೆಟಾ ಕಾರು
ಯದ್ವಾತದ್ವಾ ಚಲಿಸಿದ ಕಾರಣ ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ಬಳಿ ಕರುವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರು ಗಂಭೀರ ಗಾಯಗೊಂಡಿದೆ. ಅಲ್ಲಿಂದ ಮುಂದಕ್ಕೆ ಚಲಿಸಿದ ಕಾರು ಪಂಡಿತ್ ಹೌಸ್ ಬಸ್ ನಿಲ್ದಾಣದ ಬಳಿಯ ರಸ್ತೆಯಲ್ಲಿದ್ದ ಎರಡು ಹಸು ಮತ್ತೊಂದು ಹೋರಿಗೆ ರಭಸವಾಗಿ ಬಡಿದು ಪಲ್ಟಿಯಾಗಿ ಉರುಳಿ ಬಿದ್ದಿದೆ.


ಅಪಘಾತದ ತೀವ್ರತೆಗೆ ಮೂರು ಗೋವುಗಳ ಕರುಳು ಹೊರ ಬಂದು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿ ಯುವತಿಯರು ಹಾಗೂ ಯುವಕರಿದ್ದರೆಂದು ಹೇಳಲಾಗಿದ್ದು, ಅವರನ್ನು ದೇರಳಕಟ್ಟೆಯ ದಾಖಲಿಸಲಾಗಿದೆ. ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸವಾರರಲ್ಲಿ ಓರ್ವ ವೈದ್ಯನಾಗಿದ್ದು ಬಾಕಿ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು