12:18 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಗರ ಮೋಜು- ಮಸ್ತಿ: ರಸ್ತೆಯಲ್ಲೇ ಯುವಕ-ಯುವತಿಯ ಡ್ಯಾನ್ಸ್; ಟ್ರಾಫಿಕ್ ಜಾಮ್

10/07/2023, 11:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿ ಜಾಸ್ತಿಯಾಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
ಘಾಟಿಯುದ್ಧಕ್ಕೂ ಸಣ್ಣ ಸಣ್ಣ ಜಲಪಾತ ತಲೆದೋರುವುದು ಮಳೆಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ವಾಟರ್ ಫಾಲ್ಸ್ ನ ಸೊಬಗಿಗೆ, ಪ್ರಕೃತಿಯ ಧಾರಾಳತನಕ್ಕೆ ಮನಸೋತು ಇಲ್ಲಿ ಪ್ರವಾಸಿಗರು ತಮ್ಮ ವಾಹನಗಳಿಂದ ಇಳಿದು ರಸ್ತೆಯಲ್ಲಿ ಡ್ಯಾನ್ಸ್ ಮಾಡುತ್ತಾರೆ. ಇನ್ನು ತುಂತುರು ಮಳೆ ಬೀಳುತ್ತಿದ್ದರೆ ಪ್ರವಾಸಿಗರು ಮೋಜು- ಮಸ್ತಿ ಹೇಳತೀರದು. ರಸ್ತೆಯಲ್ಲೇ ಯುವಕ- ಯುವತಿಯರು ರೈನ್ ಡ್ಯಾನ್ಸ್ ಮಾಡುತ್ತಾರೆ. ಇದರಿಂದ ಪ್ರಯಾಣಿಕರ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.
ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರನ್ನು ಹೇಳೋರಿಲ್ಲ-ಕೇಳೋರಿಲ್ಲ ಎಂಬ ಸ್ಥಿತಿ ಇದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಕಿರಿದಾದ ಹಾವು ಬಳುಕಿನ ಮೈಕಟ್ಟಿನಲ್ಲಿ ರಸ್ತೆ ಇದೆ.
ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಕಾಣಿಸುವುದಿಲ್ಲ. ಕುಣಿಯುವ ಭರದಲ್ಲಿ ವಾಹನಗಳಿಗೂ ಪ್ರವಾಸಿಗರು ಅಡ್ಡ ಬರುತ್ತಾರೆ.


ಅಪಘಾತ, ಟ್ರಾಫಿಕ್ ಜಾಮ್ ಗೂ ಆಹ್ವಾನ ನೀಡಿದಂತಾಗುತ್ತದೆ. ಜಲಪಾತಗಳ ಬಳಿ ಪೊಲೀಸರ ಬೀಟ್ ಹಾಕುವಂತೆ ಸ್ಥಳಿಯರ ಮನವಿ ಮಾಡಿದ್ದಾರೆ.
ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೆಲವು ಪ್ರವಾಸಿಗರು ಮುಂದಾಗುತ್ತಾರೆ ಎಂಬ ದೂರು ಕೂಡ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು