10:48 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಪಡುಬಿದ್ರೆಯಲ್ಲಿ ಕೊಲೆ ಮಾಡಿ ದೇವರಮನೆ ಬಳಿ ಶವ ಎಸೆದ ಪ್ರಕರಣ: ಮತ್ತೆ 4 ಮಂದಿ ಬಂಟ್ವಾಳದ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೇರಿಕೆ

10/07/2023, 18:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲ್ಲೂಕು ಮಂಚಿ ಗ್ರಾಮದ ದಾವೂದ್ ಅಮೀರ್(25), ಅಬ್ದುಲ್ ರಹೀಜ್(23), ಬಂಟ್ವಾಳ ತಾಲ್ಲೂಕು ಕವಾಲ ಮಡೂರು ಗ್ರಾಮದ ಆಫ್ರಿದಿ(23), ಮಹಮ್ಮದ್ ಇರ್ಷಾದ್(20) ಎಂದು ಗುರುತಿಸಲಾಗಿದೆ.

ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.
ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.
ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು