3:13 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೈಕೊಟ್ಟ ಏರ್ ಇಂಡಿಯಾ ವಿಮಾನ!: ದುಬೈಗೆ ತೆರಳಬೇಕಿದ್ದ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ!

11/07/2023, 13:43

ಮಂಗಳೂರು(reporterkarnataka.com): ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಬೇಕಿದ್ದ ವಿಮಾನ ಏರ್ ಪೋರ್ಟ್ ನಲ್ಲೇ ಉಳಿದ ಕಾರಣ ಪ್ರಯಾಣಿಕರು ರಾತ್ರಿ ಯಿಡೀ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದ್ದು, ಪ್ರಯಾಣಿಕರು ಹಾಗೂ ಅಧಿಕಾರಿಗಳ ಜತೆ ವಾಗ್ವಾದ ನಡೆಯಿತು.
ಮಂಗಳೂರು ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ 11.15ಕ್ಕೆ ತೆರಳಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ಸರಿಪಡಿಸಲು ತಂತ್ರಜ್ಞರು ತಿರುವನಂತಪುರ ವಿಮಾನ ನಿಲ್ದಾಣದಿಂದ ಆಗಮಿಸಬೇಕಿತ್ತು. ಇದರ ಪರಿಣಾಮ ದುಬೈ ತೆರಳಬೇಕಿದ್ದ ಸುಮಾರು 180 ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಉಳಿಯ ಬೇಕಾಯಿತು. ಈ ನಡುವೆ ಇಂದು ಬೆಳಗ್ಗೆ 9 ಗಂಟೆಗೆ ದುಬೈಗೆ ಪ್ರಯಾಣ ಬೆಳೆಸುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ ಬೆಳಗ್ಗೆ 10 ಗಂಟೆ ಕಳೆದ ಬಳಿಕವೂ ವ್ಯವಸ್ಥೆ ಮಾಡದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು