1:11 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೈಕೊಟ್ಟ ಏರ್ ಇಂಡಿಯಾ ವಿಮಾನ!: ದುಬೈಗೆ ತೆರಳಬೇಕಿದ್ದ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ!

11/07/2023, 13:43

ಮಂಗಳೂರು(reporterkarnataka.com): ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಬೇಕಿದ್ದ ವಿಮಾನ ಏರ್ ಪೋರ್ಟ್ ನಲ್ಲೇ ಉಳಿದ ಕಾರಣ ಪ್ರಯಾಣಿಕರು ರಾತ್ರಿ ಯಿಡೀ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದ್ದು, ಪ್ರಯಾಣಿಕರು ಹಾಗೂ ಅಧಿಕಾರಿಗಳ ಜತೆ ವಾಗ್ವಾದ ನಡೆಯಿತು.
ಮಂಗಳೂರು ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ 11.15ಕ್ಕೆ ತೆರಳಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ಸರಿಪಡಿಸಲು ತಂತ್ರಜ್ಞರು ತಿರುವನಂತಪುರ ವಿಮಾನ ನಿಲ್ದಾಣದಿಂದ ಆಗಮಿಸಬೇಕಿತ್ತು. ಇದರ ಪರಿಣಾಮ ದುಬೈ ತೆರಳಬೇಕಿದ್ದ ಸುಮಾರು 180 ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಉಳಿಯ ಬೇಕಾಯಿತು. ಈ ನಡುವೆ ಇಂದು ಬೆಳಗ್ಗೆ 9 ಗಂಟೆಗೆ ದುಬೈಗೆ ಪ್ರಯಾಣ ಬೆಳೆಸುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ ಬೆಳಗ್ಗೆ 10 ಗಂಟೆ ಕಳೆದ ಬಳಿಕವೂ ವ್ಯವಸ್ಥೆ ಮಾಡದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು