1:13 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಧಿಕಾರಸ್ಥರೇ ಇನ್ನಾದೂ ಕಣ್ಣು ಬಿಡಿ: ರಸ್ತೆ ಇಲ್ಲದ ಕಲ್ಕೋಡಿನಲ್ಲಿ ರೋಗಿಗಳನ್ನು ಸಾಗಿಸುವುದು ಜೋಳಿಗೆಯಲ್ಲಿ!!

12/07/2023, 20:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದ ಜನರ ಪಾಡು. ಯಾರಿಗಾದರೂ ಹುಷಾರಿಲ್ಲದಿದ್ದರೆ ರಸ್ತೆ ಸಂಪರ್ಕವಿಲ್ಲದ ಈ ಗ್ರಾಮದಿಂದ ಅನಾರೋಗ್ಯಪೀಡಿತರನ್ನು ಜೋಳಿಗೆಯಲ್ಲಿ ಕಟ್ಟಿ 1 ಕಿಮೀ. ದೂರದ ಕಳಸ ಪೇಟೆಗೆ ಕರೆದುಕೊಂಡು ಹೋಗಬೇಕು. ಇದೀಗ ಅನಾರೋಗ್ಯಪೀಡಿತ 70ರ ಹರೆಯದ ಶೇಷಮ್ಮ ಅವರನ್ನು ಜೋಳಿಗೆಯಲ್ಲಿ ಕಟ್ಟಿ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ ಯಶೋಗಾಥೆ ಇಲ್ಲಿದೆ.


ಕಳಸ ತಾಲೂಕಿನ ಕಲ್ಕೋಡು ಗ್ರಾಮದಲ್ಲಿ 70 ವರ್ಷದ ಶೇಷಮ್ಮರನ್ನ ಜೋಳಿಗೆಯಲ್ಲಿ ಕುಟುಂಬಸ್ಥರು ಕಟ್ಟಿ ಸುಮಾರು 1 ಕಿಮೀ ಉದ್ದದ ದುರ್ಗಮ ಪ್ರದೇಶವನ್ನು ಕ್ರಮಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಲ್ಕೋಡು ಗ್ರಾಮದಿಂದ ಕಳಸ ತಾಲೂಕಿಗೆ ಬರಬೇಕು ಅಂದ್ರೆ 4 ಕಿ.ಮೀ. ಆಗುತ್ತದೆ. ಕುದುರೆಮುಖ ಮೂಲಕ ಸುತ್ತಿಬರಲು 8 ಕಿ.ಮೀ. ಆಗುತ್ತದೆ. ಮುಕ್ಕಾಲು ಕಿ.ಮೀ. ಬಂದ್ರೆ ಆಟೋ ಸಿಗುತ್ತದೆ. ಆದ್ರೆ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಧಿಕಾರಿಗಳು ರಸ್ತೆ ಬಿಡ್ತಿಲ್ಲ.
ರಸ್ತೆ ಇಲ್ಲದ ಕಾರಣ ರೋಗಿಯನ್ನ ಸುಮಾರು 1 ಕಿ.ಮೀ. ಜೋಳಿಗೆಯಲ್ಲಿ ತಂದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸುತ್ತಾರೆ. ಮುಕ್ಕಾಲು ಕಿ.ಮೀ. ರಸ್ತೆಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು, ಜನನಾಯಕರು ಯಾರೂ ಸ್ಪಂದಿಸಿಲ್ಲ. ಕಲ್ಕೋಡು ಗ್ರಾಮ 10 ಮನೆ, 30-40 ಜನಸಂಖ್ಯೆ ಇರುವ ಕಾಡಂಚಿನ ಕುಗ್ರಾಮವಾಗಿದೆ.
#KarnatakaGovt #karnatakatransportminister #karnatakapwdminister #KarnatakaHealthMinister #karnatakapwd #karnatakahealth #karnatakapwddepartment #chikkamagaluruadministration #chikkamagaluru

ಇತ್ತೀಚಿನ ಸುದ್ದಿ

ಜಾಹೀರಾತು