5:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುವ ಏರೋಪ್ಲೇನ್ ಚಿಟ್ಟೆ ಕೃತಿ: ತೇಜಸ್ವಿ ಓದು ಕಾರ್ಯಕ್ರಮದಲ್ಲಿ ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ

12/07/2023, 21:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೀವ ಜಗತ್ತಿನ ಕ್ರಿಮಿ ಕೀಟಗಳ, ಪ್ರಾಣಿ ಪಕ್ಷಿಗಳ, ನೆಲ ಜಲದ, ಮರ ಗಿಡಗಳ ಮತ್ತು ಮಾನವ ಸಂಬಂಧಗಳ ಕುರಿತ ಕಥೆಗಳು ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯಲ್ಲಿದ್ದು ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುತ್ತದೆ ಎಂದು ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ನಡೆದ ತೇಜಸ್ವಿ ಓದು ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯ ಬಗ್ಗೆ ಉಪನ್ಯಾಸ ನೀಡಿ ಅವರು ಮಾತನಾಡಿದರು. ಪರಿಸರಕ್ಕೆ ಹತ್ತಿರವಾಗಿ ಮತ್ತು ಪೂರಕವಾಗಿ ಪ್ರಾಣಿ ಪಕ್ಷಿಗಳು ಬದುಕುತ್ತವೆ, ಆ ಪ್ರಾಣಿ ಪಕ್ಷಿಗಳು ಹೇಗೆ ಅಪಾಯದ ಅಂಚಿನಲ್ಲಿವೆ, ಆ ಪ್ರಾಣಿ ಪಕ್ಷಿಗಳ ರಕ್ಷಣೆಯ ಜವಾಬ್ದಾರಿ ನಮ್ಮೆಲರ ಮೇಲಿದೆ ಎಂಬುದನ್ನು ಈ ಕೃತಿಯಲ್ಲಿ ದಾಖಲಿಸಿದ್ದಾರೆ ಎಂದರು.
ಹಳ್ಳಿಯ ಕೊನೆ ಅಂಚಿನ ಜನರ ರೂಡಿಯ ಮಾತುಗಳನ್ನು ಕೂಡ ಸಂಶ್ಲೇಷಣೆ ಮಾಡಿ ಆ ಮಾತುಗಳಲ್ಲಿನ ಸತ್ಯವನ್ನು, ವೈಜ್ಞಾನಿಕವಾಗಿರುವ ಸಂಗತಿಗಳನ್ನು ಕಂಡು ಹಿಡಿಯುವಂತಹ ಕೆಲಸವನ್ನು ಮಾಡಿದ್ದಾರೆ. ಸಮಾಜದ ಕೊನೆಯಂಚಿನ ಜನರ ಬದುಕನ್ನು ತಮ್ಮ ಕೃತಿಗಳಲ್ಲಿ ಕಥೆಯಾಗಿಸಿದ್ದಾರೆ. ತೇಜಸ್ವಿ ಅವರ ಕೃತಿಗಳನ್ನು ಓದುವುದರಿಂದ ಪರಿಸರಕ್ಕೆ ಪೂರಕವಾಗಿ ಬದುಕಬೇಕು ಎಂಬ ಅರಿವು ನಮ್ಮಲ್ಲಿ ಮೂಡುತ್ತದೆ. ತೇಜಸ್ವಿ ಅವರು ಓದಿದ್ದು ಕನ್ನಡ ಸಾಹಿತ್ಯವಾಗಿದ್ದರೂ ಕೂಡ ಯಾವ ಜೀವ ವಿಜ್ಞಾನಿಗೂ ಕಡಿಮೆ ಇಲ್ಲದ ಕೆಲಸವನ್ನು ಮಾಡಿದವರು ಪೂರ್ಣಚಂದ್ರ ತೇಜಸ್ವಿ ಅವರು. ಯಾವತ್ತೂ ಅಳಿಸಿ ಹೋಗದಂತಹ ಪರಿಸರದ ಕೌತುಕಗಳನ್ನು ತಮ್ಮ ಕೃತಿಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ತೇಜಸ್ವಿ ಅವರ ಕೃತಿಗಳನ್ನು ಮಕ್ಕಳು, ವಿದ್ಯಾರ್ಥಿಗಳು ಓದುವಂತಾಗಬೇಕಿದೆ. ಆ ಮೂಲಕ ಪರಿಸರದ ಬಗ್ಗೆ ಬೆರಗು, ಕುತೂಹಲ, ಜಾಗೃತಿ ಮೂಡಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕರಾದ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು