9:07 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾವೂರು ಪೊಲೀಸರ ಕಾರ್ಯಾಚರಣೆ: ನಿಷೇಧಿತ ಮಾದಕ ದ್ರವ್ಯ, ಮಾರಕ ಆಯುಧ, ಕಾರು ವಶ; ಇಬ್ಬರ ಬಂಧನ

13/07/2023, 12:11

ಮಂಗಳೂರು(reporterkarnataka.com): ಮಾರಕ ಆಯುಧಗಳೊಂದಿಗೆ ನಿಷೇಧಿತ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ನಿಷೇಧಿತ ಮಾದಕ ದ್ರವ್ಯ 4 ಗ್ರಾಂ ಎಂಡಿಎಂಎ ಅನ್ನು 3 ಮಾರಕ ಆಯುಧಗಳೊಂದಿಗೆ ಮಾರಾಟ ಮಾಡಲು ಬಂದವರನ್ನು ಪತ್ತೆ ವಶಪಡಿಸಿಕೊಳ್ಳುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಪಿಲಿಕುಳದ ಮೊಹಮ್ಮದ್ ಶಾರೂಕ್ (27) ಹಾಗೂ ಶೇಡಿಗುರಿಯ ಜಗದೀಶ್‌ (45) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರ ವಶದಲ್ಲಿದ್ದ 4.5 ಗ್ರಾಂ ಎಂಡಿಎಂಎ ಸ್ವಾಧಿನಪಡಿಸಿಕೊಂಡಿದ್ದಾರೆ. 3 ಮಾರಕ ಆಯುಧ ಹಾಗೂ 1 ಮಾರುತಿ ಸ್ವಿಫ್ಟ್ ಕಾರು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 4.41 ಲಕ್ಷ ರೂ. ಆಗಿರುತ್ತದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರ ನಿರ್ದೆಶನದಂತೆ ಡಿಸಿಪಿ (ಕಾ & ಸು) ಮತ್ತು ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ಉತ್ತರ ಉಪ-ವಿಭಾಗದ ಎಸಿಪಿ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಕಾವೂರು ಪೊಲೀಸ್ ನಿರೀಕ್ಷಕರಾದ ಗುರುರಾಜ್ ಮತ್ತು ಪಿಎಸ್ ಐ ಮಲ್ಲಿಕಾರ್ಜುನ ಬಿರಾದಾರ, ಲತೇಶ್ ಹಾಗೂ ಸಿಬ್ಬಂದಿಗಳಾದ ತಾರಾನಾಥ ಪುತ್ರನ್, ಕಿಶೋರ್, ಸಂಭಾಜಿ ಕಾರ್ಯಾಚರಣೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು