1:12 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಾಠ ಕೇಳೋದು ಬಿಟ್ಟು ಊಟಕ್ಕೆ ನೀರು ತರಲು ಹೋದ ಸರಕಾರಿ ಶಾಲೆ ಮಕ್ಕಳು!!

13/07/2023, 13:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇಲ್ವಾ ಎಂದು ಪ್ರಶ್ನಿಸಬೇಡಿ. ಇದೆ. ಆದರೆ, ದೊಡ್ಡವರ ಹಗ್ಗಜಗ್ಗಾಟದಲ್ಲಿ ಮಕ್ಕಳು ಪಾಠ ಕೇಳೋದು ಬಿಟ್ಟು ನೀರು ತರುವಂತಾಗಿದೆ. ಶಾಲೆಯ ಮುಖ್ಯೋಪಾಧ್ಯರು ಕಳೆದೊಂದು ವಾರದಿಂದ ರಜೆ ಇದ್ದಾರೆ. ಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಕೂಡ ಹಾಳಾಗಿದೆ.

ಆದರೆ, ಪೈಪ್ ಲೈನ್ ಹಾಳಾಗಿದೆ ಎಂದು ಶಾಲೆಯವರು ಗ್ರಾಮ ಪಂಚಾಯಿತಿಗೆ ಹೇಳಿದ್ದಾರೋ… ಇಲ್ಲವೋ… ಗೊತ್ತಿಲ್ಲ. ಆದರೆ, ಈಗ ಒಬ್ಬರ ಮೇಲೋಬ್ಬರು ಗೂಬೆ ಕೂರಿಸಿತ್ತಾ ಮಕ್ಕಳ ಕೈನಲ್ಲಿ ಬಿಸಿಯೂಟಕ್ಕೆ ನೀರು ಹೋರಿಸುತ್ತಿದ್ದಾರೆ. ಈಗ ಪಂಚಾಯಿತಿಯವರು ಶಾಲೆಯವರು ನಮಗೆ ಈ ವಿಷಯವನ್ನೇ ಹೇಳಿಲ್ಲ ಅಂತಿದ್ದಾರೆ. ಆದರೆ, ಶಾಲೆಯವರು ನಾವು ಪಂಚಾಯಿತಿಯವರಿಗೆ ಹೇಳಿದ್ದೇವೆ ಅವರು ರಿಪೇರಿ ಮಾಡಿಲ್ಲ ಎಂದು ಪಂಚಾಯಿತಿಯವರ ಮೇಲೆ ಹೇಳುತ್ತಿದ್ದಾರೆ. ಯಾರು ಯಾರಿಗೆ ಹೇಳಿದ್ದಾರೋ.. ಇಲ್ವೋ… ಆದರೆ, ಈಗ ಮಕ್ಕಳು ಪಾಠ ಕೇಳೋದ ಬಿಟ್ಟು ಶಾಲೆಯ ಬಿಸಿಯೂಟಕ್ಕೆ ನೀರು ಹೊರುತ್ತಿದ್ದಾರೆ. ನೀರು ಹೊತ್ತು ಸುಸ್ತಾದ ಮಕ್ಕಲೇ ಪೈಪ್ ಲೈನ್ ದುರಸ್ಥಿ ಮಾಡಲು ಮುಂದಾಗಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಹಾಗಾಗಿ, ಕೊನೆಗೆ ಅನಿವಾರ್ಯವಾಗಿ ಮಕ್ಕಳು ನೀರು ಹೊತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟವರೆ ಉತ್ತರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು