8:07 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಂಗಳೂರು: ಡಿವೈಡರ್ ಹಾರಿ ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಸ್ವಲ್ಪದಲ್ಲೇ ಪಾರು: ಅದೃಷ್ಟವಶಾತ್ ಮೂವರು ಬಚಾವ್

15/07/2023, 10:45

ಮಂಗಳೂರು(reporterkarnataka.com): ನಗರದ ಕದ್ರಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ್ದು, ಅದೃಷ್ಟವಶಾತ್
ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪುವ ಮೂಲಕ ಕಾರಲ್ಲಿದ್ದ ಮೂವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ್ಯರಾಗಿ ಪಾರಾಗಿದ್ದಾರೆ.
ಶುಕ್ರವಾರ ತಡರಾತ್ರಿ ಸುಮಾರು 12.30ರ ವೇಳೆಗೆ ಅಪಘಾತ ನಡೆದಿದೆ. ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ದಾರಿ ದೀಪದ ಲೈಟ್ ಕಂಬ ದೂರಕ್ಕೆ ಎಸೆಯಲ್ಪಟ್ಟಿದೆ.
ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು