1:12 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆಂಪುಗುಡ್ಡೆ ಇನ್ ಡೇಂಜರ್: ಅಮ್ಟಾಡಿ ಗ್ರಾಮದಲ್ಲಿ ಹೆದ್ದಾರಿ ಬದಿಯಲ್ಲೇ ಗುಡ್ಡ ಕುಸಿಯುವ ಭೀತಿ; ನಾಗರಿಕರಲ್ಲಿ ಹೆಚ್ಚಿದ ಆತಂಕ

16/07/2023, 13:42

ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ

info.reporterkarnataka@gmail.com
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ
ವಿಶಾಲವಾದ ಕೆಂಪುಗುಡ್ಡೆಯ ಮಧ್ಯೆ ಕೇರೆ ಹಾವಿನಂತೆ ಹಾದು ಹೋಗುವ ಲೋಕೋಪಯೋಗಿ ಇಲಾಖೆಗೆ ಸೇರಿದ ಹೆದ್ದಾರಿ ರಸ್ತೆ ಕಳೆದ ವಾರ ಸುರಿದ ಭಾರೀ ಮಳೆಗೆ ಹೆದ್ದಾರಿ ಬದಿಯಲ್ಲೇ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ.
ರಸ್ತೆ ಬದಿಯಲ್ಲಿ ಉದ್ದಕ್ಕೆ ಸುಮಾರು 500 ಮೀಟರ್ ಉದ್ದದಲ್ಲಿ ಗುಡ್ಡ ಬಿರುಕು ಬಿಟ್ಟಿದೆ. ಅಷ್ಟು ಮಾತ್ರವಲ್ಲೇ ಗುಡ್ಡದ ನೇರ ಭಾಗದಲ್ಲೂ ಗುಡ್ಡ ಇಬ್ಬಾಗವಾಗಿರುವುದು ಕಾಣಿಸಿದೆ.ರಸ್ತೆಯಿಂದ ಕೆಳಗೆ ಇಳಿಜಾರು ಪ್ರದೇಶದಲ್ಲಿ ವಾಸ್ತವ್ಯ ಇರುವ ಮನೆಗಳು, ಕೃಷಿಭೂಮಿ ಇದೆ. ಇದಕ್ಕೆಲ್ಲ ಅಪಾಯವನ್ನು ತಂದೊಡ್ಡಿದೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಜಗದಂಬಿಕಾ ಭಜನಾ ಮಂದಿರದ ಸಮೀಪದ ಗುಡ್ಡ ಬಿರುಕು ಕಂಡು ಬಂದಿದ್ದು, ಈ ಭಾಗದಲ್ಲಿ ಸಂಚರಿಸುವ ಗ್ರಾಮಸ್ಥರು ಆತಂಕಕ್ಕೊಳಪಟ್ಟಿದ್ದಾರೆ. ಕೆಲವು ವರ್ಷಗಳ ಹಿಂದೆ ಗುಡ್ಡವನ್ನು ಸಮತಟ್ಟು ಮಾಡಿದ ಪರಿಣಾಮ ಗುಡ್ಡದ ಮತ್ತೊಂದು ಬದಿಯಲ್ಲಿ ಗುಡ್ಡ ಬಿರುಕು ಬಿಟ್ಟಿದೆ. ಗುಡ್ಡೆ ಬಿರುಕು ಕಂಡು ಬಂದಂತೆ ಅಮ್ಟಾಡಿ ಪಂಚಾಯತ್‌ನಿಂದ ಸಾರ್ವಜನಿಕರಿಗೆ ತಿಳಿಯಪಡಿಸಲು ರಸ್ತೆ ಇರುವ ಎರಡು ಬದಿಯಲ್ಲೂ ಸೂಚನಾ ಫಲಕವನ್ನೂ ಹಾಕಿದ್ದಾರೆ.


ಅಜೆಕಲ-ಕೆಂಪುಗುಡ್ಡೆ-ಕಲ್ಪನೆ ರಸ್ತೆ ಕಾಮಗಾರಿಗೆ ಕೇಂದ್ರೀಯ ರಸ್ತೆ ನಿಧಿ ಯೋಜನೆಯಡಿ 2013ರಲ್ಲಿ ಸುಮಾರು 4 ಕೋಟಿ ಅನುದಾನದಲ್ಲಿ ಬಂಟ್ವಾಳ ಉಪವಿಭಾಗದ ಲೋಕೋಪಯೋಗಿ ಇಲಾಖೆಗೆ ಅಚ್ಚುಕಟ್ಟಾಗಿ ಸುಸಜ್ಜಿತ ರಸ್ತೆಯು ಗುಡ್ಡದಿಂದ ನೀರು ನಿರಂತರವಾಗಿ ಇಳಿದು ಬರುವುದರಿಂದ ರಸ್ತೆಯೂ ಹಾಳಾಗಿರುತ್ತದೆ. ಈ ಭಾಗದಿಂದ ಕಲ್ಪನೆಗೆ ಕೇವಲ 8 ಕಿ.ಮೀ. ದೂರ ಇರುವುದು. ಇಲ್ಲಿಂದ ಬೆಂಜನಪದವು ಮಾರ್ಗವಾಗಿ ನೀರುಮಾರ್ಗ-ಮಂಗಳೂರು, ಫರಂಗಿಪೇಟೆ-ಮಂಗಳೂರು ತಲುಪಬಹುದು. ಅದೇ ರೀತಿ ಪುಣ್ಯ ಕ್ಷೇತ್ರಗಳಾದ ಕಲ್ಪನೆ-ಪೊಳಲಿ, ಕಟೀಲು ಹಾಗೂ ಬಜಪೆ ವಿಮಾನ ನಿಲ್ದಾಣವನ್ನೂ ತಲುಪಬಹುದು. ಬಂಟ್ವಾಳ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದ ಜನರಿಗೆ ಬಿ.ಸಿ.ರೋಡು ಹೋಗುವ ಬದಲು ಈ ಮಾರ್ಗವಾಗಿ ಮೇಲಿನ ಸ್ಥಳಗಳನ್ನು ತಲುಪುವುದು ಸುಲಭ ಸಾಧ್ಯವಾಗಿದೆ.
ಅಮ್ಟಾಡಿ ಗ್ರಾಮದ ಈ ರಸ್ತೆ ಗ್ರಾಮೀಣ ಭಾಗದಲ್ಲಿ ಮುಖ್ಯ ರಸ್ತೆಯಾಗಿರುತ್ತದೆ. ಈ ರಸ್ತೆಯಲ್ಲಿ ಯಾವುದೇ ಬಸ್ಸಿನ ವ್ಯವಸ್ಥೆ ಇಲ್ಲದಿದ್ದರೂ ಅಟೋ ರಿಕ್ಷಾದ ಮೂಲಕ ಪ್ರಯಾಣ ಮಾಡುತ್ತಾರೆ. ಖಾಸಗಿ ಸ್ಥಳವಾದರೂ ಹಚ್ಚ ಹಸುರಾಗಿರುವ ಕೆಂಪುಗುಡ್ಡ ಪ್ರದೇಶವನ್ನು ಉಳಿಸಿಕೊಳ್ಳುವುದು ಜನರ ಕರ್ತವ್ಯ. ಗುಡ್ಡದ ಮೇಲೆ ಮಣ್ಣು ಅಗೆತ, ಗುಡ್ಡ ಒಂದು ಬದಿಯಿಂದ ಕುಸಿಯಲು ಪ್ರಾರಂಭವಾದರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಳೆ ಕೇವಲ ನಾಲ್ಕು ದಿನ ಬಂದಿರುವುದು. ಜೋರು ಮಳೆ ಇನ್ನು ಬರಬೇಕಷ್ಟೆ. ಮಳೆಯು ಎಡೆಬಿಡದೆ ಸುರಿಯಲು ಆರಂಭವಾದರೆ ಮಾತ್ರ ಅಪಾಯ ಕಟ್ಟಿಟ್ಟ ಬುತ್ತಿ.
ಕೆಂಪುಗುಡ್ಡೆಯಲ್ಲಿ ಬಿರುಕು ಕಂಡು ಬಂದಿರುವುದರಿಂದ ಅಮ್ಟಾಡಿ ಪಂಚಾಯತ್‌ನಿಂದ ರಸ್ತೆಯ ಎರಡೂ ಬದಿಗಳಲ್ಲಿ ಸಾರ್ವಜನಿಕರಿಗೆ ಗೊತ್ತಾಗುವಂತೆ ಬ್ಯಾನರ್ ಅಳವಡಿಸಲಾಗಿದೆ. ಲೋಕೋಪಯೋಗಿ ಇಲಾಖೆಗೆ ಗಮನ ತಂದಿದ್ದು, ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಬಿರುಕು ಪರಿಶೀಲನೆ ಮಾಡಿದ್ದಾರೆ. ಮಳೆ ಕಡಿಮೆಯಾದ ನಂತರ ರಸ್ತೆ ಹಾಳಾಗದಂತೆ ಸೂಕ್ತ ಕ್ರಮ ಜರಗಿಸುವುದೆಂದು ಎಂದು
ಸುನೀಲ್ ಬಿ., (ಉಪಾಧ್ಯಕ್ಷರು, ಅಮ್ಟಾಡಿ ಗ್ರಾಮ ಪಂಚಾಯತ್) ತಿಳಿಸಿದ್ದಾರೆ.
ಕಳೆದ ವರ್ಷವೇ ಈ ಸ್ಥಳದಲ್ಲಿ ರಸ್ತೆಯ ಬದಿಯಲ್ಲಿ ಬಿರುಕು ಬಿಟ್ಟಿರುತ್ತದೆ. ಗುಡ್ಡದಿಂದ ನಿರಂತರವಾಗಿ ರಸ್ತೆಯಲ್ಲೇ ನೀರು ಸಂಚರಿಸುತ್ತಿದೆ. ದಿನಂಪ್ರತಿ ಇದೇ ರಸ್ತೆಯಲ್ಲಿ ನಾವು ದ್ವಿಚಕ್ರ ವಾಹನದ ಮುಖಾಂತರ ಸಂಚರಿಸುತ್ತಾ ಇದ್ದೇವೆ. ಯಾವುದೇ ಗಂಡಾಂತರ ಬಾರದಂತೆ ಈ ಮಳೆಗಾಲ ಕಳೆಯಲಿ ಎಂಬುದೇ ನಮ್ಮ ಆಶಯ ಎನ್ನುತ್ತಾರೆ ಕಲ್ಪನೆಯ ನಿವಾಸಿ
ಉಮೇಶ್ ಅವರು.

ಇತ್ತೀಚಿನ ಸುದ್ದಿ

ಜಾಹೀರಾತು